ರಾಜ್ಯಸಭೆಗೆ ಡಾ.ಸುಧಾಮೂರ್ತಿ ನಾಮ ನಿರ್ದೇಶನ..!

ಮಹಿಳಾ ದಿನಾಚರಣೆಯಂದೇ ಡಾ.ಸುಧಾಮೂರ್ತಿ ಅವರನ್ನು ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನ ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಈ ಬಗ್ಗೆ ಮಾಹಿತಿ ನೀಡಲಾಗಿದೆ.

ಸಮಾಜ ಸೇವೆ, ದಾನ, ಶಿಕ್ಷಣ ಕ್ಷೇತ್ರದಲ್ಲಿ ಸುಧಾಮೂರ್ತಿ ಕೊಡುಗೆ ಅಪಾರ, ಸ್ಫೂರ್ತಿದಾಯಕವಾಗಿದೆ. ರಾಜ್ಯಸಭೆಯಲ್ಲಿ ಸುಧಾಮೂರ್ತಿ ಅವರ ಉಪಸ್ಥಿತಿ ನಮ್ಮ ನಾರಿಶಕ್ತಿಗೆ ಸಾಕ್ಷಿ, ಸುಧಾಮೂರ್ತಿ ಅವರಿಗೆ ಪಾರ್ಲಿಮೆಂಟ್ ನಾಮನಿರ್ದೇಶಿತ ಸದಸ್ಯರಾಗಿ ಕಾರ್ಯನಿರ್ವಹಣೆಗೆ ಶುಭ ಹಾರೈಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಸುಧಾಮೂರ್ತಿರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಲಾಗಿದೆ.

You cannot copy content from Baravanige News

Scroll to Top