Monday, April 29, 2024
Homeಸುದ್ದಿರಾಷ್ಟ್ರೀಯಪಾಳು ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಣೆ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಐದು ಮಂದಿ ಯುವಕರು

ಪಾಳು ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಣೆ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಐದು ಮಂದಿ ಯುವಕರು

ಮಹಾರಾಷ್ಟ್ರ: ಪಾಳು ಬಿದ್ದ ಬಾವಿಯಿಂದ ಬೆಕ್ಕನ್ನು ರಕ್ಷಿಸಲು ಹೋಗಿ ಒಂದೇ ಮನೆಯ ಆರು ಜನರು ಬಾವಿಗೆ ಬಿದ್ದ ಘಟನೆ ನೆವಾಸ ತಾಲೂಕಿನ ವಕಾಡಿ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.

ಈ ದುರ್ಘಟನೆಯಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ.

ಪಾಳು ಬಿದ್ದ ಬಾವಿಯನ್ನು ಮುಚ್ಚಲಾಗಿತ್ತು. ಅದರಲ್ಲಿ ಕಸವನ್ನು ಶೇಖರಣೆ ಮಾಡಲಾಗಿತ್ತು. ಹೀಗಾಗಿ ಅದರಲ್ಲಿ ವಿಷ ಅನಿಲ ಸೇರಿತ್ತು ಎನ್ನಲಾಗುತ್ತಿದೆ. ಇದೇ ಬಾವಿಗೆ ಮನೆಯ ಬೆಕ್ಕು ಬಿದ್ದದ್ದನ್ನು ಗಮನಿಸಿದ ಮನೆ ಮಂದಿ ಅದನ್ನು ಕಾಪಾಡಲೆಂದು ಮುಂದಾಗುತ್ತಾರೆ. ಈ ವೇಳೆ ಒಬ್ಬರಂತೆ ಒಬ್ಬರು ಬಾವಿಗೆ ಇಳಿಯುತ್ತಾರೆ. ಒಟ್ಟು ಆರು ಜನರು ಬಾವಿಗೆ ಇಳಿದಿದ್ದು, ಅದರಲ್ಲಿ ಐವರು ಪ್ರಾಣ ಕಳೆದುಕೊಂಡಿದ್ದಾರೆ. ಒಬ್ಬರು ಬದುಕುಳಿದಿದ್ದಾರೆ.

ಬಾವಿಯಿಂದ ಶಬ್ಧ ಕೇಳಿ ಬಂದಾಗ ನೆರೆಹೊರೆಯವರು ನೋಡಿ ಹೋಗಿದ್ದಾರೆ. ಈ ವೇಳೆ ಆರು ಜನರು ಬಾವಿಯಲ್ಲಿ ಕಾಣಿಸಿಕೊಂಡಿದ್ದಾರೆ. ನೆರೆಹೊರೆಯವರ ರಕ್ಷಣಾ ತಂಡಕ್ಕೆ ಮಾಹಿತಿ ನೀಡಿದ್ದು, ಅವರ ಸಹಾಯದಿಂದ ಓರ್ವನನ್ನು ಬದುಕಿಸಿದ್ದಾರೆ. ಉಳಿದ ಐವರು ಪ್ರಾಣ ಕಳೆದುಕೊಂಡಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News