Wednesday, May 15, 2024
Homeಸುದ್ದಿಕರಾವಳಿಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ : ಓರ್ವ ಯುವತಿ ಮೃತ್ಯು,...

ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ : ಓರ್ವ ಯುವತಿ ಮೃತ್ಯು, ನಾಲ್ವರಿಗೆ ಗಂಭೀರ ಗಾಯ

ತೆಕ್ಕಟ್ಟೆ : ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಯುವತಿ ಸ್ಥಳದಲ್ಲೇ ಮೃತಪಟ್ಟು, ಉಳಿದವರು ಗಂಭೀರವಾಗಿ ಗಾಯಗೊಂಡ ಘಟನೆ ತೆಕ್ಕಟ್ಟೆಯ ಗುಡ್ಡೆಅಂಗಡಿ ರಾ.ಹೆ. ಕೊಯ್ಕಾಡಿ ತಿರುವಿನಲ್ಲಿ ನಡೆದಿದೆ.

ಬೆಂಗಳೂರಿನ ಖಾಸಗಿ ಕಂಪೆನಿಯ ಉದ್ಯೋಗಿ ಕೀರ್ತಿ (25) ಮೃತ್ಯು.

ವಿಘ್ನೇಶ್‌ (28), ಚೇತನ್‌ (28), ಐಶ್ವರ್ಯಾ (27), ಲತಾ (26) ಗಂಭೀರವಾಗಿ ಗಾಯಗೊಂಡವರು.

ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರಿನ ಒಂದು ಪಾರ್ಶ್ವ ಸಂಪೂರ್ಣ ಜಖಂಗೊಂಡಿತ್ತು. ಇನ್ನು ಬೆಂಗಳೂರಿನಿಂದ ಗೋಕರ್ಣದ ಕಡೆಗೆ 6 ಜನ ಇನ್ನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ಗಾಯಾಳುಗಳನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News