Friday, March 29, 2024
Homeಸುದ್ದಿಟಿಪ್ಪರ್ - ಬೈಕ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು!

ಟಿಪ್ಪರ್ – ಬೈಕ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು!

ಬೈಂದೂರು: ಅತೀ ವೇಗವಾಗಿ ಬಂದ ಟಿಪ್ಪರ್ ಲಾರಿಯೊಂದು ರಸ್ತೆ ದಾಟಲು ನಿಂತಿದ್ದ ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರೂರು ಕೆಳಪೇಟೆಯಲ್ಲಿ ನಡೆದಿದೆ.

ಅಪಘಾತದಲ್ಲಿ ಮೃತ ಬೈಕ್ ಸವಾರನನ್ನು ರವಿ ಮೇಸ್ತ ಎಂದು ಗುರುತಿಸಲಾಗಿದೆ. ರವಿ ಮೇಸ್ತ ಅವರು ನಿನ್ನೆ ಸಂಜೆ ವೇಳೆ ಶಿರೂರು ಮೇಲ್ಪೇಟೆ ಕಡೆಯಿಂದ ಹೈವೇಯ ಪೂರ್ವ ದಿಕ್ಕಿನಲ್ಲಿ ಬಂದು ಶಿರೂರು ಕೆಳಪೇಟೆಯ ಯೂ-ಟರ್ನ್ ಬಳಿ ರಸ್ತೆಯನ್ನು ದಾಟಲು ತಮ್ಮ ಬೈಕ್ ನ್ನು ನಿಲ್ಲಿಸಿ ನಿಂತಿದ್ದರು. ಈ ವೇಳೆ ಕುಂದಾಪುರ ಕಡೆಯಿಂದ ಭಟ್ಕಳ ಕಡೆಗೆ ಹೈವೇಯ ಪಶ್ಚಿಮ ಬದಿಯ ರಸ್ತೆಯಲ್ಲಿ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಟಿಪ್ಪರ್ ಲಾರಿ ಚಾಲಕ ಮೈನುದ್ದೀನ್ ನಿಂತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಬೈಕ್ ಹಾಗೂ ಅದರ ಸವಾರ ಲಾರಿಯ ಅಡಿಯಲ್ಲಿ ಸಿಕ್ಕಿಹಾಕಿಕೊಂಡಿದ್ದು, ಲಾರಿ ಸ್ವಲ್ಪ ದೂರ ಎಳೆದುಕೊಂಡು ಹೋಗಿದೆ. ಇದರಿಂದ ಗಂಭೀರ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಈ ಬಗ್ಗೆ ಶಿರೂರಿನ ನಾಗರಾಜ ಮೇಸ್ತ ಎಂಬವರು ನೀಡಿದ ದೂರಿನಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News