Saturday, April 20, 2024
Homeಸುದ್ದಿರಿಕ್ಷಾದಲ್ಲಿ ಮರೆತು ಬಿಟ್ಟಿದ್ದ 12ಲಕ್ಷ ಮೌಲ್ಯದ ಚಿನ್ನವನ್ನು ಮರಳಿಸಿ ಮಾನವೀಯತೆ ಮೆರೆದ ಆಟೋ ಡ್ರೈವರ್!

ರಿಕ್ಷಾದಲ್ಲಿ ಮರೆತು ಬಿಟ್ಟಿದ್ದ 12ಲಕ್ಷ ಮೌಲ್ಯದ ಚಿನ್ನವನ್ನು ಮರಳಿಸಿ ಮಾನವೀಯತೆ ಮೆರೆದ ಆಟೋ ಡ್ರೈವರ್!

ಉಡುಪಿ: ರಿಕ್ಷಾದಲ್ಲಿ ಮಹಿಳೆಯೊಬ್ಬರು ಬಿಟ್ಟು ಹೋದ 12 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಾರೀಸುದಾರರಿಗೆ ಮರಳಿಸುವ ಮೂಲಕ ರಿಕ್ಷಾ ಚಾಲಕರೊಬ್ಬರು ಪ್ರಾಮಾಣಿಕತೆ ಮೆರೆದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ.

ಬಳ್ಳೂರು ಕಾರೇಕುದ್ರುವಿನ ರಿಕ್ಷಾ ಚಾಲಕ ಪ್ರಕಾಶ್ ನಾಯಕ್ ಅವರ ರಿಕ್ಷಾದಲ್ಲಿ, ಲಲಿತಾ ಕೆ. ಎಂಬವರು ಕುಂದಾಪುರ ಪೇಟೆಯಿಂದ ಮನೆಗೆ ತೆರಳಿದ್ದರು.ರಿಕ್ಷಾ ಇಳಿಯುವ ವೇಳೆ ಸುಮಾರು 12 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣವನ್ನು ಮರೆತು ರಿಕ್ಷಾದಲ್ಲೇ ಬಿಟ್ಟು ಹೋಗಿದ್ದರು. ರಿಕ್ಷಾದ ಸೀಟಿನ ಕೆಳಗೆ ಚಿನ್ನಾಭರಣ ನೋಡಿದ ಚಾಲಕ ಪ್ರಕಾಶ್ ನಾಯಕ್, ಅದನ್ನು ಕುಂದಾಪುರ ಪೊಲೀಸ್ ಠಾಣೆಗೆ ಒಪ್ಪಿಸಿದರು.

ಲಲಿತಾ ಅವರು, ಚಿನ್ನ ಕಳೆದುಹೋಗಿರುವ ಬಗ್ಗೆ ಗೊತ್ತಾಗಿ, ಪೊಲೀಸ್ ಠಾಣೆಗೆ ದೂರು ನೀಡಲು ಬಂದಾಗ, ಪೊಲೀಸರು ಚಿನ್ನ ಕಳೆದುಕೊಂಡವರು ಲಲಿಲಾ ಅವರೇ ಅಂತ ಖಚಿತ ಪಡಿಸಿ, ಚಿನ್ನಾಭರಣವನ್ನು ಒಪ್ಪಿಸಿದರು. ಆಟೋ ಚಾಲಕ ಪ್ರಕಾಶ್ ಪ್ರಾಮಾಣಿಕತೆಗೆ ಪ್ರಶಂಸೆ ವ್ಯಕ್ತವಾಗಿದೆ

RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News