Wednesday, April 24, 2024
Homeಸುದ್ದಿಕರಾವಳಿಬೆಳ್ಮಣ್: ಕೆದಿಂಜೆ ಸಮೀಪ ಕಣಿವೆಗೆ ಉರುಳಿದ ಕಾರು – ಓರ್ವ ಸಾವು

ಬೆಳ್ಮಣ್: ಕೆದಿಂಜೆ ಸಮೀಪ ಕಣಿವೆಗೆ ಉರುಳಿದ ಕಾರು – ಓರ್ವ ಸಾವು

ಕಾರ್ಕಳ : ಬೋಳ ಕೆದಿಂಜೆ ಸಮೀಪದ ಮಂಜರಪಲ್ಕೆಯಲ್ಲಿ ಉಚ್ಚಿಲ ಮೂಲದ ಕಿಯಾ ಕಾರೊಂದು ಕಣಿವೆಗೆ ಉರುಳಿದ ಘಟನೆ ನ. 21ರಂದು ಬೆಳಿಗ್ಗೆ ಸಂಭವಿಸಿದೆ.

ಕಾರಿನಲ್ಲಿ ಇಬ್ಬರು ಮಕ್ಕಳು, ಇಬ್ಬರು ಮಹಿಳೆಯರು ಸೇರಿದಂತೆ 7 ಮಂದಿ ಪ್ರಯಾಣಿಸುತ್ತಿದ್ದು, ಅವರಲ್ಲಿ ಓರ್ವ ಮೃತಪಟ್ಟಿದ್ದಾರೆ.ಉಡುಪಿಯ ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ಪ್ರಥಮ ಪಿಯುಸಿ ವಿದ್ಯಾರ್ಥಿ ವೈಷ್ಣವ್ ಮೃತಪಟ್ಟ ದುರ್ದೈವಿ ಎಂದು ತಿಳಿದುಬಂದಿದೆ.

ಉಚ್ಚಿಲದಲ್ಲಿ ತಮ್ಮದೇ ಮನೆಯಲ್ಲಿ ಬಾಡಿಗೆಗೆ ಇರುವ ಕುಟುಂಬದ ಸದಸ್ಯರೊಟ್ಟಿಗೆ ಬೆಂಗಳೂರಿಗೆ ತಿರುಗಾಡಲು ಹೋಗಿ ಬರುವ ವೇಳೆ ಕಾರ್ಕಳದಿಂದ ಬೆಳ್ಮಣ್‌ ಕಡೆಗೆ ಸಾಗುತ್ತಿದ್ದ ಕಿಯಾ ಕಾರು ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿ ಬಿದ್ದಿದೆ. ಇನ್ನು ಘಟನೆಯಲ್ಲಿ ಇನ್ನಿಬ್ಬರು ಮಹಿಳೆಯರೂ ಗಂಭೀರ ಗಾಯಗೊಂಡಿದ್ದು, ಕಾರ್ಕಳ ಸಿಟಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News