Friday, April 19, 2024
Homeಸುದ್ದಿಕರಾವಳಿಪದವಿ ಶಿಕ್ಷಣ ಕಲಿಯಲೆಂದು ದುಬೈಗೆ ತೆರಳಿದ್ದ ಉಡುಪಿ ಮೂಲದ ವಿದ್ಯಾರ್ಥಿ ಜ್ವರದಿಂದ‌‌‌ ಮೃತ್ಯು!

ಪದವಿ ಶಿಕ್ಷಣ ಕಲಿಯಲೆಂದು ದುಬೈಗೆ ತೆರಳಿದ್ದ ಉಡುಪಿ ಮೂಲದ ವಿದ್ಯಾರ್ಥಿ ಜ್ವರದಿಂದ‌‌‌ ಮೃತ್ಯು!

ಉಡುಪಿ : ಪದವಿ ಶಿಕ್ಷಣ ಕಲಿಯಲೆಂದು ದುಬೈಗೆ ತೆರಳಿದ್ದ ಮೂಲತಃ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ವಿದ್ಯಾರ್ಥಿಯೋರ್ವ ಅನಾರೋಗ್ಯಕ್ಕೀಡಾಗಿ ಸೋಮವಾರ(ಡಿ.5)ರಂದು ನಿಧನರಾಗಿದ್ದಾರೆ. ನಿಧನರಾದ ವಿದ್ಯಾರ್ಥಿಯನ್ನು ಕಾಪು ತಾಲೂಕಿನ ಅಹ್ಮದ್ ಬಿಲಾಲ್ ಕಾಪು(20) ಎಂದು ತಿಳಿದುಬಂದಿದೆ.

ಬಿಲಾಲ್ ಉಡುಪಿಯಲ್ಲಿ ದ್ವಿತೀಯ ಪಿಯುಸಿ ಮುಗಿಸಿ, ಪದವಿ ಶಿಕ್ಷಣವನ್ನು ಗಳಿಸುವ ಉದ್ದೇಶದಿಂದ ದುಬೈಗೆ ತೆರಳಿದ್ದರು. ಆದರೆ ಆ ಬಳಿಕ ಜ್ವರಕ್ಕೆ ತುತ್ತಾಗಿದ್ದರು. ನ್ಯುಮೋನಿಯಾ ಕೂಡ ಕಾಡಿದ್ದರಿಂದ ಚಿಕಿತ್ಸೆಗಾಗಿ ಶಾರ್ಜಾದಲ್ಲಿರುವ ಕುವೈಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 20 ದಿನಗಳಿಂದ ನಿರಂತರವಾಗಿ ಚಿಕಿತ್ಸೆ ಪಡೆಯುತ್ತಿದ್ದರೂ, ಬಹು ಅಂಗಾಂಗ ವೈಫಲ್ಯಕ್ಕೊಳಗಾಗಿ ಡಿ 5ರ ಸೋಮವಾರದಂದು ನಿಧನರಾದರು ಎಂದು ತಿಳಿದುಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News