Tuesday, April 23, 2024
Homeಸುದ್ದಿಕರಾವಳಿಉಡುಪಿ: ಕೆವೈಸಿ ಅಪ್ ಡೇಟ್ ನೆಪದಲ್ಲಿ ವ್ಯಕ್ತಿಯೋರ್ವರಿಗೆ ವಂಚನೆ

ಉಡುಪಿ: ಕೆವೈಸಿ ಅಪ್ ಡೇಟ್ ನೆಪದಲ್ಲಿ ವ್ಯಕ್ತಿಯೋರ್ವರಿಗೆ ವಂಚನೆ

ಉಡುಪಿ: ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಕೆವೈಸಿ ಅಪ್ ಡೇಟ್ ಮಾಡುವ ನೆಪದಲ್ಲಿ ವ್ಯಕ್ತಿಯೊಬ್ಬರ ಖಾತೆಯಿಂದ 99,000 ರೂ. ನಗದನ್ನು ಆನ್ನೈನ್ ಮೂಲಕ ದೋಚಿರುವ ಬಗ್ಗೆ ಉಡುಪಿ ನನ್ ಅಪರಾಧ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಬಗ್ಗೆ ಹಣ ಕಳೆದುಕೊಂಡ ಗುಂಡಿಬೈಲ್ ನಿವಾಸಿ ಭಾಸ್ಕರ ಸೇರಿಗಾರ ಆವರು ಪೊಲೀಸರಿಗೆ ದೂರು ನೀಡಿದ್ದು, ನಿನ್ನೆ ಬೆಳಿಗ್ಗೆ ಇವರಿಗೆ ಅಪರಿಚಿತ ವ್ಯಕ್ತಿ ಕರೆ ಮಾಡಿ ತಾನು ಬ್ಯಾಂಕ್ ಅಧಿಕಾರಿ, ಈ ಕೂಡಲೇ ನಿಮ್ಮ ಬ್ಯಾಂಕ್ ಖಾತೆಯ ಕೆ.ವೈ.ಸಿ. ಅಪ್‌ಡೇಟ್ ಮಾಡಬೇಕು ಇಲ್ಲವಾದಲ್ಲಿ ಖಾತೆ ಬ್ಲಾಕ್ ಆಗುತ್ತದೆ ಎಂದು ಹೇಳಿದ್ದಾನೆ. ಇದನ್ನು ನಂಬಿದ ಭಾಸ್ಕರ ಅವರು, ಆಧಾರ್ ವಿವರ, ಬ್ಯಾಂಕ್ ವಿವರ, ಎ.ಟಿ.ಎಂ. ವಿವರ ನೀಡಿದ್ದು ಬಳಿಕ ಕರೆ ಮಾಡಿದ ವ್ಯಕ್ತಿ ಓ.ಟಿ.ಪಿ. ವಿವರವನ್ನು ಪಡೆದು ತಮ್ಮ ಮಣಿಪಾಲದ ಕೆನರಾ ಬ್ಯಾಂಕ್ ಖಾತೆಯಿಂದ 99,000 ರೂ. ಹಣವನ್ನು ಆನ್ ಲೈನ್ ಮುಖಾಂತರ ವರ್ಗಾವಣೆ ಮಾಡಿ ಮೋಸದಿಂದ ನಷ್ಟ ಉಂಟು ಮಾಡಿರುವುದಾಗಿ ನೀಡಿದ ದೂರಿನಂತೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News