Thursday, March 28, 2024
Homeಸುದ್ದಿಕರಾವಳಿಉಡುಪಿ: ಓವರ್ ಟೇಕ್ ಭರದಲ್ಲಿ ಟಿಪ್ಪರ್ ಗೆ ಸ್ಕೂಟರ್ ಡಿಕ್ಕಿ; ಸವಾರ ಮೃತ್ಯು

ಉಡುಪಿ: ಓವರ್ ಟೇಕ್ ಭರದಲ್ಲಿ ಟಿಪ್ಪರ್ ಗೆ ಸ್ಕೂಟರ್ ಡಿಕ್ಕಿ; ಸವಾರ ಮೃತ್ಯು

ಉಡುಪಿ: ಟಿಪ್ಪರ್ ಗೆ ಸ್ಕೂಟರ್ ಡಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಅಂಬಲಪಾಡಿ ಗ್ರಾಮದ ಕರಾವಳಿ ಜಂಕ್ಷನ್ ಬಳಿ ನಡೆದಿದೆ.

ಮೃತರನ್ನು ಗಣಪತಿ ಪೈ ಎಂದು ಗುರುತಿಸಲಾಗಿದೆ.

ಪುತ್ತೂರು ಗ್ರಾಮದ ತೋನ್ಸೆ ಮಾಧವ ಪೈ ಎಂಬವರ ಮಾಲಕತ್ವದ ಟಿಪ್ಪರ್ ನ್ನು ಅದರ ಮಾಲಕ ವಿಠಲ್ ಅವರು ಮಾ 1 ರಂದು ರಾತ್ರಿ ವೇಳೆ ಅಂಬಲಪಾಡಿ ಗ್ರಾಮದ ಕರಾವಳಿ ಜಂಕ್ಷನ್ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಡುಪಿ ಕರಾವಳಿ ಕಡೆಗೆ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಕರಾವಳಿ ಕಡೆಯಿಂದ ಗುಡಿಕಟ್ಟಿ ಕಡೆಗೆ ಹೋಗುತ್ತಿದ್ದ ಸ್ಕೂಟರ್ ಸವಾರ ಗಣಪತಿ ಪೈ ಅವರು ತನ್ನ ಸ್ಕೂಟರ್ ನ್ನು ದುಡುಕುತನ ಮತ್ತು ನಿರ್ಲಕ್ಷ್ಯತನದಿಂದ ಸವಾರಿ ಮಾಡಿಕೊಂಡು ತನ್ನ ಮುಂದೆ ಹೋಗುತ್ತಿದ್ದ ಬಸ್ ನ್ನು ಓವರ್ ಟೇಕ್ ಮಾಡಿ ರಸ್ತೆಯ ತೀರಾ ಬಲ ಭಾಗಕ್ಕೆ ಬಂದು ಟಿಪ್ಪರ್ ಗೆ ಡಿಕ್ಕಿ ಹೊಡೆದಿದ್ದಾರೆ.

ಪರಿಣಾಮ ಸ್ಕೂಟರ್ ಸವಾರ ಗಣಪತಿ ಪೈ ಸ್ಕೂಟರ್ ಸಮೇತ ರಸ್ತೆಗೆ ಬಿದ್ದಿದ್ದು, ಹಿಂಬದಿ ತಲೆಗೆ ಗಂಭೀರ ಗಾಯಗೊಂಡಿದ್ದರು. ತಕ್ಷಣ ಗಣಪತಿ ಪೈ ರವರನ್ನು ಉಡುಪಿಯ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋದ ವೇಳೆ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಅಪಘಾತದಲ್ಲಿ ಟಿಪ್ಪರ್ ಮುಂಭಾಗ ಹಾಗೂ ಸ್ಕೂಟರ್ ಜಖಂಗೊಂಡಿದೆ, ಈ ಬಗ್ಗೆ ಮಾಧವ ಪೈ ಅವರು ನೀಡಿದ ದೂರಿನಂತೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News