ಉಡುಪಿ: ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಅಪೂರ್ವ ಧಾರ್ಮಿಕ ಕಾರ್ಯಕ್ರಮವನ್ನು ನಡೆಯುತ್ತಿದೆ. 15 ದಿನಗಳ ನಿರಂತರ ಕಾರ್ಯಕ್ರಮದಲ್ಲಿ 2 ಲಕ್ಷ ಭಕ್ತರು ಭಾಗಿಯಾಗಲಿದ್ದಾರೆ. ಗಂಗೆಗೆ ನಡೆಯುವ ಮಾದರಿಯ ಆರತಿ ಕೈಲಾಸವಾಸಿ ಶಿವನಿಗೆ ಆಗಲಿದೆ.
ಇತಿಹಾಸದಲ್ಲೇ ಮೊದಲ ಬಾರಿಗೆ ಉಡುಪಿಯಲ್ಲಿ ಅತಿ ರುದ್ರ ಮಹಾಯಾಗ ನಡೆಯುತ್ತಿದೆ. ಮಣಿಪಾಲ ಸಮೀಪದ ಸರಳಬೆಟ್ಟು ಶ್ರೀ ಉಮಾಮಹೇಶ್ವರಿ ದೇವಸ್ಥಾನ ದಲ್ಲಿ ಈ ಧಾರ್ಮಿಕ ಕಾರ್ಯಕ್ರಮ ಆರಂಭವಾಗಿದೆ. ಬರೋಬ್ಬರಿ 15 ದಿನಗಳ ಕಾಲ ನಡೆಯುವ ಅತಿ ರುದ್ರ ಮಹಾಯಾಗದಲ್ಲಿ 150 ಜನ ಋತ್ವಿಜರು ರುದ್ರಪಠಣ, ಯಾಗ- ಹೋಮದಲ್ಲಿ ಭಾಗಿಯಾಗಿದ್ದಾರೆ.
![](https://i0.wp.com/www.baravanige.com/wp-content/uploads/2023/03/UDUPI_-SHIVARATHI-3-optimized.webp?resize=696%2C345&ssl=1)
ಶೈವ ಪರಂಪರೆ ಮಾದರಿಯಲ್ಲಿ ಪೂಜೆ ಪುನಸ್ಕಾರ ಹೋಮ ಮಂತ್ರ ಪಠಣ ಯಾಗಗಳು ನಡೆಯುತ್ತಿದೆ. ಪ್ರತಿ ರುದ್ರಪಠಣದ ನಂತರ ಈಶ್ವರ ದೇವರಿಗೆ ಕಲಾ ಸೇವೆ ನಡೆಯುತ್ತಿದೆ. ಸಂಗೀತ ಭರತನಾಟ್ಯ, ಯಕ್ಷಗಾನ ಸೇವೆಯನ್ನು ದೇವರಿಗೆ ಸಮರ್ಪಿಸಲಾಗುತ್ತಿದೆ. ಮುಂಜಾನೆಯಿಂದ ರಾತ್ರಿಯತನಕ ನಿರಂತರ ಅನ್ನದಾನ ಫಲಹಾರಗಳು ಸುಮಾರು 2 ಲಕ್ಷ ಜನಕ್ಕೆ ಏರ್ಪಾಟು ಮಾಡಲಾಗಿದೆ.
![](https://i0.wp.com/www.baravanige.com/wp-content/uploads/2023/03/UDUPI_-SHIVARATHI-2-optimized.webp?resize=696%2C343&ssl=1)
ಅತಿ ರುದ್ರ ಮಹಾಯಾಗದ ಮತ್ತೊಂದು ಆಕರ್ಷಣೆ ಶಿವಾರತಿ ಗಂಗಾವತಿಯ ಮಾದರಿಯಲ್ಲೇ ಶಿವಾರತಿಯನ್ನು ದೇವರಿಗೆ ಸಮರ್ಪಣೆ ಮಾಡಲಾಗುತ್ತಿದೆ. ಉಡುಪಿ ನಡೆಯುತ್ತಿರುವ ಅತಿ ರುದ್ರ ಮಹಾಯಾಗಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ದೇಶದ ಕೆಲ ಭಾಗಗಳಿಂದ ಉತ್ತರ ಭಾರತದಿಂದ ಭಕ್ತರು ಬರುತ್ತಿದ್ದಾರೆ. ಶೃಂಗೇರಿ ಸ್ವಾಮೀಜಿಗಳ ನೇತೃತ್ವದಲ್ಲಿ ಅತಿರುದ್ರ ಮಹಾಯಾಗದ ಪೂರ್ಣಾವತಿ ನಡೆಯಲಿದೆ. ಜೀವಿತಾವಧಿಯಲ್ಲಿ ಒಂದು ಬಾರಿಯಾದರೂ ಅತಿರುದ್ರ ಮಹಾಯಾಗದಲ್ಲಿ ಭಾಗಿಯಾಗಬೇಕು ಎಂಬ ನಂಬಿಕೆಯಿದೆ.
![](https://i0.wp.com/www.baravanige.com/wp-content/uploads/2023/03/UDUPI_-SHIVARATHI-optimized.webp?resize=696%2C340&ssl=1)