Saturday, April 20, 2024
Homeಸುದ್ದಿಕರಾವಳಿಕರಾವಳಿಯಲ್ಲಿ ಗರಿಷ್ಠ ಉಷ್ಣಾಂಶ 2 ಡಿಗ್ರಿ ಸೆ. ಇಳಿಕೆ ಸಾಧ್ಯತೆ; ಐಎಂಡಿ

ಕರಾವಳಿಯಲ್ಲಿ ಗರಿಷ್ಠ ಉಷ್ಣಾಂಶ 2 ಡಿಗ್ರಿ ಸೆ. ಇಳಿಕೆ ಸಾಧ್ಯತೆ; ಐಎಂಡಿ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಿಗೆ ನೀಡಿದ್ದ ಬಿಸಿ ಗಾಳಿ ಎಚ್ಚರಿಕೆಯನ್ನು ಹಿಂಪಡೆದಿದ್ದು, ರವಿವಾರ (ಮಾ. 5)ರಿಂದ ಗರಿಷ್ಠ ಉಷ್ಣಾಂಶ 2 ಡಿಗ್ರಿ ಸೆ.ಗಳಷ್ಟು ಇಳಿಕೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಕರಾವಳಿಯಲ್ಲಿ ಉಷ್ಣ ಅಲೆಯ ಪ್ರಭಾವ ಎರಡು ದಿನ ಕಂಡು ಬಂದಿತ್ತು. ಆದರೆ ಇದು ಸಾಮಾನ್ಯವಾಗಿ ಉಂಟಾಗುವ ಹೀಟ್‌ ವೇವ್‌ ಅಲ್ಲ, ಬದಲಾಗಿ ಆಗಾಗ್ಗೆ ತಾಪಮಾನದ ದಿಢೀರ್‌ ಏರಿಕೆಯಿಂದ ಈ ರೀತಿ ಆಗಿದೆ. ಹಾಗಾಗಿ ಎರಡು ದಿನಗಳಿಗೆ ಸೀಮಿತಗೊಂಡು ಕಡಿಮೆಯಾಗಿದೆ. ಸಾಮಾನ್ಯವಾಗಿ ಏಪ್ರಿಲ್‌ -ಮೇ ತಿಂಗಳಲ್ಲಿ ಉಷ್ಣ ಅಲೆಯ ಪ್ರಮಾಣ ಹೆಚ್ಚಿರುತ್ತದೆ ಎನ್ನುತ್ತಾರೆ ಹವಾಮಾನ ವಿಶ್ಲೇಷಕರು.

ವಾತಾವರಣದಲ್ಲಿ ಬಿಸಿಯ ಅನುಭವ
ಉಷ್ಣ ಅಲೆಯ ಪರಿಣಾಮ ಶನಿವಾರ ವಾತಾವರಣದಲ್ಲಿ ಉಷ್ಣತೆಯ ಅನುಭವ ಹೆಚ್ಚಾಗಿತ್ತು. ಮಧ್ಯಾಹ್ನ ಉರಿ ಸೆಕೆ ಜನರನ್ನು ಬಳಲಿ ಬೆಂಡಾಗುವಂತೆ ಮಾಡಿದೆ. ಬಿಸಿಲಿನಿಂದ ರಕ್ಷಿಸಿಕೊಳ್ಳಲು ಛತ್ರಿ, ರುಮಾಲು, ಟೋಪಿ, ಮರದ ನೆರಳಿನ ಆಶ್ರಯ ಪಡೆಯುವುದು ಸಾಮಾನ್ಯವಾಗಿತ್ತು. ಸೀಯಾಳ, ಜ್ಯೂಸ್‌ ಅಂಗಡಿಗಳಲ್ಲಿ ಜನರು ಹೆಚ್ಚಾಗಿ ಕಂಡು ಬಂದಿದ್ದಾರೆ. ಬಸ್ಸು ಸಹಿತ ವಿವಿಧ ವಾಹನಗಳಲ್ಲಿ ತೆರಳುವವರಿಗೆ ಗಾಳಿಯಲ್ಲಿ ಬಿಸಿ ಹೆಚ್ಚಿರುವುದು ಅನುಭವಕ್ಕೆ ಬಂದಿದೆ.
ಶನಿವಾರ ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 36.6 ಡಿಗ್ರಿ ಸೆ. ದಾಖಲಾದರೆ, ಕನಿಷ್ಠ 20.8 ಡಿಗ್ರಿ ಸೆ. ದಾಖಲಾಗಿದೆ.

ಉಷ್ಣ ಅಲೆ ಘೋಷಣೆ ಹೇಗೆ?
ಹವಾಮಾನ ಇಲಾಖೆ ಕರಾವಳಿಯಲ್ಲಿ ಹೀಟ್‌ ವೇವ್‌ ಘೋಷಿಸಬೇಕಾದರೆ ತಾಪಮಾನ 37 ಡಿಗ್ರಿ ಸೆ. ತಲುಪುವುದರೊಂದಿಗೆ ಸಾಮಾನ್ಯಕ್ಕಿಂತ 4.5 ಡಿಗ್ರಿ ಸೆ. ಉಷ್ಣಾಂಶ ಏರಿಕೆಯಾಗಬೇಕು. ಈ ರೀತಿಯ ತಾಪಮಾನ ಒಂದೇ ಭಾಗದ ಕನಿಷ್ಠ ಎರಡು ಹವಾಮಾನ ನಿಗಾ ಕೇಂದ್ರಗಳಲ್ಲಿ ಎರಡು ದಿನ ದಾಖಲಾದರೆ ಆಗ ಎರಡನೇ ದಿನ ಇದನ್ನು ಉಷ್ಣ ಅಲೆ ಎಂದು ಪ್ರಕಟಿಸಲಾಗುತ್ತದೆ.

ಕರಾವಳಿಯಲ್ಲಿ ಕಾರವಾರ ಮತ್ತು ಪಣಂಬೂರು ಹವಾಮಾನ ಕೇಂದ್ರಗಳಲ್ಲಿ ಇದು ದಾಖಲಾಗಿದ್ದು, ಉಷ್ಣ ಅಲೆಯ ಎಚ್ಚರಿಕೆ ನೀಡಲಾಗಿದೆ. ಕರಾವಳಿಯ ಐದಾರು ಸ್ಟೇಷನ್‌ಗಳಿಂದ ಉಷ್ಣಾಂಶ ಮಾಹಿತಿ ಇಲಾಖೆಗೆ ಲಭ್ಯವಾಗುತ್ತದೆ. ನಿರಂತರ ನಿಗಾ ಇರಿಸಲಾಗುತ್ತಿದೆ ಎಂದು ಐಎಂಡಿ ಬೆಂಗಳೂರು ವಿಜ್ಞಾನಿ ಪ್ರಸಾದ್‌ ತಿಳಿಸಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News