ಬೈಂದೂರು: ಮಲಗಿದ್ದಲ್ಲೇ ವ್ಯಕ್ತಿ ಹೃದಯಾಘಾತದಿಂದ ಮೃತ್ಯು!

ಬೈಂದೂರು: ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬೈಂದೂರಿನ ಹೆರಂಜಾಲು ಗ್ರಾಮದಲ್ಲಿ ನಡೆದಿದೆ.

ಸ್ಥಳೀಯ ನಿವಾಸಿ ಪ್ರಭಾಕರ ಆಚಾರ್ಯ (36) ಮೃತಪಟ್ಟವರು.

ಮಾ.8 ರಂದು ರಾತ್ರಿ ಮನೆಯಲ್ಲಿ ಮಲಗಿದ್ದ ಅವರು ಬೆಳಿಗ್ಗೆ ಏಳದೇ ಇದ್ದುದನ್ನು ಕಂಡು ಅವರ ತಂದೆ ನಾರಾಯಣ ಆಚಾರ್ಯ ಎಬ್ಬಿಸಲು ಹೋದಾಗ ಅವರು ಮೃತಪಟ್ಟಿರುವುದು ಕಂಡು ಬಂದಿದೆ. ಅದರಂತೆ ಮನೆಯಲ್ಲಿ ಮಲಗಿದ್ದವರು ಹೃದಯಾಘಾತದಿಂದ ಅಥವಾ ಇನ್ಯಾವುದೋ ಕಾರಣದಿಂದ ಮೃತಪಟ್ಟಿರುವುದಾಗಿ ನಾರಾಯಣ ಆಚಾರ್ಯ ಅವರು ನೀಡಿದ ಮಾಹಿತಿಯಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top