Thursday, April 25, 2024
Homeಸುದ್ದಿಕರಾವಳಿನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ವಾರಂಟ್ ಆರೋಪಿಯ ಬಂಧನ..!!

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ವಾರಂಟ್ ಆರೋಪಿಯ ಬಂಧನ..!!

ಶಿರ್ವ: ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2015ರಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಪಡುಬಿದ್ರಿ ನಡ್ಸಾಲು ಕಂಚಿನಡ್ಕ ರೈಸ್‌ ಮಿಲ್ ಬಳಿಯ ನಿವಾಸಿ ಮಹಮ್ಮದ್ ತೌಫಿಕ್ ಪ್ರೊಕ್ಲೇಮಷನ್ ವಾರೆಂಟ್ ಆರೋಪಿಯಾಗಿದ್ದು, ಶಿರ್ವ ಪೊಲೀಸ್ ಉಪನಿರೀಕ್ಷಕರಾದ ರಾಘವೇಂದ್ರ .ಸಿ (ಕಾ & ಸು) ಹಾಗೂ ಅನಿಲ್ ಕುಮಾರ್ ಟಿ.ನಾಯ್ಕ್ (ತನಿಖೆ) ಅವರ ಮಾರ್ಗದರ್ಶನದಂತೆ ಮಾ.9 ರಂದು ಪಡುಬಿದ್ರಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರ ಸಹಕಾರದಿಂದ ಕಂಚಿನಡ್ಕದಲ್ಲಿ ಮಾ.9 ರಂದು ಬಂಧಿಸಲಾಗಿದೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿ ಗೆ ಮಾ. 16ರ ವರೆಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿದೆ.

ಆರೋಪಿಯನ್ನು ಹಿರಿಯಡ್ಕ ಕಾರಾಗೃಹಕ್ಕೆ ಕಳುಹಿ‍ಸಲಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News