Saturday, July 27, 2024
Homeಸುದ್ದಿಕಾರು ಹಾಗೂ ಕಂಟೆನೈರ್ ನಡುವೆ ಭೀಕರ ಅಪಘಾತ; ಬಂಟಕಲ್ಲು ತಾಂತ್ರಿಕ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಮೃತ್ಯು

ಕಾರು ಹಾಗೂ ಕಂಟೆನೈರ್ ನಡುವೆ ಭೀಕರ ಅಪಘಾತ; ಬಂಟಕಲ್ಲು ತಾಂತ್ರಿಕ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಮೃತ್ಯು

ಹೊನ್ನಾವರ(ಮಾ.17): ಕಾರು ಮತ್ತು ಕಂಟೆನೈರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬಂಟಕಲ್ಲು ಶ್ರೀ ಮಧ್ವವಾದಿರಾಜ ತಾಂತ್ರಿಕ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ಹಿರಿಯ ಸಹಾಯಕ ಪ್ರಾಧ್ಯಾಪಕ ಅನಂತೇಶ್ ರಾವ್ (40) ಎಂಬವರು ಮೃತಪಟ್ಟ ಘಟನೆ ಇಂದು ಹೊನ್ನಾವರ ಬಳಿ ನಡೆದಿದೆ.

ಮಂಗಳೂರು ನಿವಾಸಿಯಾದ ಇವರು ಇಂದು ಮಧ್ಯಾಹ್ನ ಉಡುಪಿಯಿಂದ ಸೋದೆ ಮೂಲ ಮಠಕ್ಕೆ ತೆರಳುತ್ತಿದ್ದರು. ಈ ವೇಳೆ ಹೊನ್ನಾವರದ ಬಳಿ ಕಾರು ಕಂಟೆನೈರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಅನಂತೇಶ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News