Friday, March 29, 2024
Homeಸುದ್ದಿಅನ್ಯಕೋಮಿನ ಮೂವರು ದುಷ್ಕರ್ಮಿಗಳಿಂದ ಹಿಂದೂ ಕಾರ್ಯಕರ್ತನ ಹತ್ಯೆ: ಗೆಜ್ಜೆಗಿರಿ, ಯುವವಾಹಿನಿ, ಬಿಜೆಪಿ ಸಂಘಟಕ ಪ್ರವೀಣ್ ನೆಟ್ಟಾರ್...

ಅನ್ಯಕೋಮಿನ ಮೂವರು ದುಷ್ಕರ್ಮಿಗಳಿಂದ ಹಿಂದೂ ಕಾರ್ಯಕರ್ತನ ಹತ್ಯೆ: ಗೆಜ್ಜೆಗಿರಿ, ಯುವವಾಹಿನಿ, ಬಿಜೆಪಿ ಸಂಘಟಕ ಪ್ರವೀಣ್ ನೆಟ್ಟಾರ್ ರವರ ಬರ್ಬರ ಕೊಲೆ!

ಬೆಳ್ಳಾರೆ: ಯುವಕನೋರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಗೈದ ಘಟನೆ ಜುಲೈ 26 ರಂದು ರಾತ್ರಿ ಬೆಳ್ಳಾರೆಯಲ್ಲಿ ನಡೆದಿದೆ.

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಮೃತಪಟ್ಟ ಯುವಕ.

ಪ್ರವೀಣ್ ಅವರು ಸಾಮಾಜಿಕ, ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದರು. ಇವರು ತನ್ನ ಸ್ವಂತ ಅಂಗಡಿಯ ಮುಂಭಾಗದಲ್ಲಿ ನಿಂತಿದ್ದ ವೇಳೆ ಬೈಕ್ ನಲ್ಲಿ ಮುಸುಕು ಹಾಕಿಕೊಂಡು ಬಂದ ಮೂವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಗೈದು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಗಂಭೀರ ಗಾಯಗೊಂಡ ಪ್ರವೀಣ್ ಅವರನ್ನು ಪುತ್ತೂರಿನ ಪ್ರಗತಿ ಆಸ್ಪತ್ರೆಗೆ ಕರೆ ತರಲಾಗಿದ್ದು, ಆಸ್ಪತ್ರೆ ತಲುಪುವ ಹೊತ್ತಿಗೆ ಅವರು ಮೃತ ಪಟ್ಟಿದ್ದರೆಂದು ತಿಳಿದು ಬಂದಿದೆ.

ಪ್ರವೀಣ್ ಅವರು ಸಾವನ್ನಪ್ಪಿದ ಬೆನ್ನಲ್ಲೇ ನೂರಾರು ಸಂಖ್ಯೆಯಲ್ಲಿ ಜನರು ಆಸ್ಪತ್ರೆಗೆ ಜಮಾಯಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News