ಸ್ಯಾಂಡಲ್‌ವುಡ್‌ ಗೆ ಮತ್ತೊಂದು ಆಘಾತ; ನಿರ್ದೇಶಕ ಕಿರಣ್‌ ಗೋವಿ ಹೃದಯಾಘಾತದಿಂದ ನಿಧನ

ಬೆಂಗಳೂರು, ಮಾ 26: ಕನ್ನಡ ಚಿತ್ರರಂಗದ ನಿರ್ದೇಶಕ ಕಿರಣ್‌ ಗೋವಿ ಅವರು ಶನಿವಾರ ರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

‘ಪಯಣ’, ‘ಸಂಚಾರಿ’, ‘ಪಾರು ವೈಫ್ ಆಫ್ ದೇವದಾಸ್‌’, ‘ಯಾರಿಗೆ ಯಾರುಂಟು’ ಸಿನಿಮಾಗಳನ್ನು ನಿರ್ದೇಶಿಸಿರುವ ಕಿರಣ್‌ ಗೋವಿ ಅವರು ಕಚೇರಿಯಲ್ಲಿದ್ದ ವೇಳೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ, ಚಿಕಿತ್ಸೆ ಫ‌ಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಇನ್ನು ಕಿರಣ್‌ ಗೋವಿ ನಿರ್ದೇಶನ ಮಾಡಿದ್ದ ಪಯಣ ಸಿನಿಮಾ ದೊಡ್ಡ ಹಿಟ್‌ ಆಗಿತ್ತು.

You cannot copy content from Baravanige News

Scroll to Top