Wednesday, April 17, 2024
Homeಸುದ್ದಿಬ್ರಹ್ಮಾವರ: ಮಗಳಿಗೆ ವಾಟ್ಸಪ್ ಸಂದೇಶ ಕಳುಹಿಸಿ ನೇಣಿಗೆ ಶರಣಾದ ತಾಯಿ

ಬ್ರಹ್ಮಾವರ: ಮಗಳಿಗೆ ವಾಟ್ಸಪ್ ಸಂದೇಶ ಕಳುಹಿಸಿ ನೇಣಿಗೆ ಶರಣಾದ ತಾಯಿ

ಬ್ರಹ್ಮಾವರ, ಏ.08: ಮಗಳಿಗೆ ವಾಟ್ಸಪ್ ಸಂದೇಶ ಕಳುಹಿಸಿ ತಾಯಿ ನೇಣಿಗೆ ಶರಣಾದ ಘಟನೆ ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಎ.7ರಂದು ನಡೆದಿದೆ.

62 ವರ್ಷದ ಆಶಾಲತಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಇವರು ದತ್ತು ಪುತ್ರಿಯಾದ ಶಮೀಕ್ಷಾ ಎಂಬವರೊಂದಿಗೆ ವಾಸವಾಗಿದ್ದು, ಅವರ ಗಂಡ ಮೃತಪಟ್ಟಿದ್ದರು. ತಾಯಿ ಆಶಾಲತಾ ಹಾಗೂ ಮಗಳು ಶಮೀಕ್ಷಾಳಿಗೆ ಸಣ್ಣ ಪುಟ್ಟ ವಿಚಾರಕ್ಕೆ ಭಿನ್ನಾಭಿಪ್ರಾಯ ಉಂಟಾಗಿ ಗಲಾಟೆಯಾಗಿತ್ತು. ಇದೇ ವಿಚಾರದಲ್ಲಿ ಮನನೊಂದ ಆಶಾಲತಾ ಅವರು ನಿನ್ನೆ ಮಗಳಿಗೆ ‘ತಾನು ಸಾಯುತ್ತೇನೆ ಎಂದು’ ವಾಟ್ಸಪ್ ಸಂದೇಶ ಕಳುಹಿಸಿ, ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು ಎನ್ನಲಾಗಿದೆ.

ಮೃತ ಆಶಾಲತಾ ಅವರ ತಂಗಿ ಜ್ಯೋತಿಪ್ರಭಾ ಅವರು ಮರಣದಲ್ಲಿ ಸಂಶಯವಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News