ಸೌದಿ ಅರೇಬಿಯಾದಲ್ಲಿ ಕಾರು ಅಪಘಾತ; ಗಂಭೀರ ಗಾಯಗೊಂಡಿದ್ದ ಕಾಪುವಿನ ಯುವಕ ಮೃತ್ಯು

ಸೌದಿ ಅರೇಬಿಯಾ: ಕಾರು ಅಪಘಾತದಲ್ಲಿ ಗಾಯಗೊಂಡು ಗಂಭೀರವಸ್ಥೆಯಲ್ಲಿದ್ದ ಉಡುಪಿ ಕಾಪುವಿನ ಯುವಕ ಜುಬೈಲ್ ನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕೆಸಿಎಫ್ ಅಬುಹಾದ್ರಿಯ ಸೆಕ್ಟರ್, ಜುಬೈಲ್ ಇದರ ಈಸ್ಟ್ ಯುನಿಟ್ ನ ಪಬ್ಲಿಕೇಶನ್ ವಿಂಗ್ ನ ಕಾರ್ಯದರ್ಶಿ ಕೂಡ ಆಗಿದ್ದ ರಿಯಾಜ್ ಕಾಪು ಅಪಘಾತದಲ್ಲಿ ಕೊನೆಯುಸಿರೆಳೆದವರು.

ರಿಯಾಝ್ ಅವರಿಗೆ ಮಾ.25ಕ್ಕೆ ಜುಬೈಲ್ ನಲ್ಲಿ ಅಪಘಾತವಾಗಿತ್ತು. ಗಂಭೀರ ಗಾಯಗೊಂಡಿದ್ದ ಅವರ ಮೆದುಳು ನಿಷ್ಕ್ರಿಯಗೊಂಡಿದ್ದು, ವೆಂಟಿಲೇಟರ್ ನಲ್ಲಿ ಇರಿಸಲಾಗಿತ್ತು. ಇವರು ಚಿಕಿತ್ಸೆಗೆ ಸ್ಪಂದಿಸದೆ ಇಂದು ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸದ್ದಾರೆ.

ರಿಯಾಝ್ ಅವರಿಗೆ ಮೂರು ವರ್ಷಗಳ ಮೊದಲು ವಿವಾಹವಾಗಿತ್ತು. ಮೃತದೇಹದ ಅಂತ್ಯಸಂಸ್ಕಾರ ಸೌದಿಯಲ್ಲೇ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

Scroll to Top