ಪಡುಬಿದ್ರೆ : ದ್ವಿಚಕ್ರ ವಾಹನಕ್ಕೆ ಪಿಕಪ್ ವಾಹನ ಡಿಕ್ಕಿ : ಸವಾರ ಗಂಭೀರ

ಉಡುಪಿ : ದ್ವಿಚಕ್ರಕ್ಕೆ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಉಡುಪಿ ಪಡುಬಿದ್ರೆಯಲ್ಲಿ ನಡೆದಿದೆ.

ಕಲ್ಸಂಕ ಸೇತುವೆ ಬಳಿ ಈ ಅಪಘಾತ ಸಂಭವಿಸಿದೆ.

ಗಾಯಗೊಂಡವರನ್ನು ಪಲಿಮಾರು ಶಾಂಭವಿ ಕಂಪೌಂಡು ನಿವಾಸಿ 68 ವರ್ಷದ ವಿಜಯ ಪೂಜಾರಿ ಎಂದು ಗುರುತಿಸಲಾಗಿದೆ.

ವಿಜಯ ಅವರು ನಿವೃತ್ತ ಸರಕಾರಿ ಉದ್ಯೋಗಿಯಾಗಿದ್ದು, ಉಡುಪಿಯಿಂದ ಕೆಲಸ ಮುಗಿಸಿಕೊಂಡು ದ್ವಿಚಕ್ರವಾಹನದಲ್ಲಿ ಮರಳಿ ಮನೆಗೆ ಬರುತ್ತಿದ್ದ ವೇಳೆ ಪಡುಬಿದ್ರಿ ಕಲ್ಸಂಕ ಸೇತುವೆ ಬಳಿ ಪಿಕಪ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಸ್ಕೂಟಿ ಸವಾರ ಎಸೆಯಲ್ಪಟ್ಟರೆ,ಸ್ಕೂಟರ್ ಪಿಕಪ್ ನಡಿಯಲ್ಲಿ ಸಿಲುಕಿಕೊಂಡಿತ್ತು. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You cannot copy content from Baravanige News

Scroll to Top