Friday, March 29, 2024
Homeಸುದ್ದಿಏ. 27ರಂದು ಉಡುಪಿಗೆ ರಾಹುಲ್ ಗಾಂಧಿ ಭೇಟಿ; ಉಚ್ಚಿಲದಲ್ಲಿ ಬೃಹತ್ ಸಮಾವೇಶ

ಏ. 27ರಂದು ಉಡುಪಿಗೆ ರಾಹುಲ್ ಗಾಂಧಿ ಭೇಟಿ; ಉಚ್ಚಿಲದಲ್ಲಿ ಬೃಹತ್ ಸಮಾವೇಶ

ಉಡುಪಿ, ಏ 21: ಕರ್ನಾಟಕ ವಿಧಾನಸಭಾ ಚುನಾವಣೆ ನಾಮಪತ್ರ ಸಲ್ಲಿಕೆ ಭರಾಟೆ ಮುಗಿದಿದೆ. ಇಂದಿನಿಂದ ಅಭ್ಯರ್ಥಿಗಳ ಚುನಾವಣೆ ಪ್ರಚಾರ ವೇಗ ಪಡೆದುಕೊಳ್ಳಲಿದೆ. ಮತದಾನಕ್ಕೆ ದಿನಗಣನೆ ಸಮೀಪಿಸುತ್ತಿರುವಂತೆಯೇ, ವಿವಿಧ ಪಕ್ಷಗಳಿಗೆ ಸೇರಿದ ಹಿರಿಯ ರಾಜಕಾರಣಿಗಳು ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ.

ವಿಧಾನಸಭೆ ಚುನಾವಣೆ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಪಕ್ಷಗಳ ಘಟಾನುಘಟಿ ನಾಯಕರೆಲ್ಲಾ ರಾಜ್ಯಕ್ಕೆ ಬರುತ್ತಿದ್ದಾರೆ. ಕಾಂಗ್ರೆಸ್ ಸಹ ಹೈಕಮಾಂಡ್ ನಾಯಕರನ್ನು ಚುನಾವಣೆ ಪ್ರಚಾರಕ್ಕೆ ಕರೆಸಿಕೊಳ್ಳುತ್ತಿದೆ. ರಾಹುಲ್ ಗಾಂಧಿ ಏಪ್ರಿಲ್ 27 ರಂದು ಕರಾವಳಿಗೆ ಜಿಲ್ಲೆಗೆ ಭೇಟಿ ಕೊಡಲಿದ್ದು, ಉಡುಪಿಯ ಉಚ್ಚಿಲದಲ್ಲಿ ನಡೆಯುವ ಬೃಹತ್ ಸಮಾವೇಶ ಭಾಗವಹಿಸಿ ಚುನಾವಣಾ ಪ್ರಚಾರ ಮಾಡಲಿದ್ದಾರೆ. ಇದಲ್ಲದೇ ಮೀನುಗಾರ ಸಮುದಾಯದೊಂದಿಗೆ ಸಂವಾದವನ್ನು ನಡೆಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿದೆ.

2018ರಲ್ಲಿಯೂ ನಡೆದ ಚುನಾವಣೆಯಲ್ಲೂ ಚುನಾವಣಾ ಪ್ರಚಾರಕ್ಕಾಗಿ ಏಪ್ರಿಲ್ 27ರಂದು ರಾಹುಲ್ ಗಾಂಧಿ ಕರಾವಳಿ ಜಿಲ್ಲೆಗೆ ಭೇಟಿ ನೀಡಿದ್ದರು ಎಂಬುವುದು ವಿಶೇಷ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News