Friday, March 29, 2024
Homeಸುದ್ದಿಕರಾವಳಿ(ಮೇ 6) ಯೋಗಿ ಆದಿತ್ಯನಾಥ್‌ ದ.ಕ, ಉಡುಪಿ ಜಿಲ್ಲೆಗೆ ಭೇಟಿ

(ಮೇ 6) ಯೋಗಿ ಆದಿತ್ಯನಾಥ್‌ ದ.ಕ, ಉಡುಪಿ ಜಿಲ್ಲೆಗೆ ಭೇಟಿ

ಉಡುಪಿ: ಮೇ 6ಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.

ಮೇ 6 ರಂದು ಬೆಳಗ್ಗೆ ಶೃಂಗೇರಿಯಲ್ಲಿ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಪುತ್ತೂರಿಗೆ 12.30ಕ್ಕೆ ಆಗಮಿಸಲಿದ್ದಾರೆ.

ಅನಂತರ ಮಧ್ಯಾಹ್ನ 2 ಗಂಟೆಗೆ ಬಂಟ್ವಾಳ, ಮಧ್ಯಾಹ್ನ 3.30ಕ್ಕೆ ಕಾರ್ಕಳ, 5 ಗಂಟೆಗೆ ಹೊನ್ನಾವರಕ್ಕೆ ಭೇಟಿ ನೀಡಲಿದ್ದು, ಮುರುಡೇಶ್ವರದಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ಮಂಗಳೂರು ವಿಭಾಗ ಉಸ್ತುವಾರಿ ಉದಯಕುಮಾರ್‌ ಶೆಟ್ಟಿ ಕಿದಿಯೂರು ತಿಳಿಸಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News