Thursday, April 18, 2024
Homeಸುದ್ದಿಕರಾವಳಿಉಡುಪಿಯಲ್ಲಿ ಅಮಿತ್ ಶಾ ಭರ್ಜರಿ ಪ್ರಚಾರ

ಉಡುಪಿಯಲ್ಲಿ ಅಮಿತ್ ಶಾ ಭರ್ಜರಿ ಪ್ರಚಾರ

ಉಡುಪಿ: ಜಿಲ್ಲೆಯಲ್ಲಿ ಚುನಾವಣೆ ಪ್ರಚಾರ ರಂಗೇರಿದ್ದು, ಘಟಾನುಘಟಿ ನಾಯಕರು ಚುನಾವಣಾ ಪ್ರಚಾರಕ್ಕೆ ದೌಡಾಯಿಸುತ್ತಿದ್ದಾರೆ. ಶನಿವಾರ ಕೇಂದ್ರ‌ ಗೃಹ ಸಚಿವ ಅಮಿತ್ ಶಾ ಅವರು ಚುನಾವಣಾ ಪ್ರಚಾರ ಪ್ರಯುಕ್ತ ಹೆಲಿಕಾಪ್ಟರ್ ಮೂಲಕ ಆದಿ‌ ಉಡುಪಿ ಹೆಲಿಪ್ಯಾಡ್ ಗೆ ಬಂದಿಳಿದರು. ಉಡುಪಿಯಲ್ಲಿ ಊಟ ಮಾಡಿದ ಅವರು ಕಟಪಾಡಿ ಸಾರ್ವಜನಿಕ ಸಭೆಯಲ್ಲಿ ‌ಭಾಗವಹಿಸಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ಕುಮಾರ್, ನಗರ ಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್ ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಹೂಗುಚ್ಛ ನೀಡಿ, ಬಿಜೆಪಿ ಶಲ್ಯ ಹೊದಿಸಿದರು.

ಕಟಪಾಡಿ ಕಾರ್ಯಕ್ರಮದ ಬಳಿಕ ರೋಡ್ ಶೋಗಾಗಿ ಬೈಂದೂರು ವಿಧಾನಸಭಾ ಕ್ಷೇತ್ರದ ಸಿದ್ದಾಪುರಕ್ಕೆ ತೆರಳಲಿದ್ದಾರೆ. ಸಂಜೆ 5 ರಿಂದ 7 ರವರೆಗೆ ಮಂಗಳೂರಿನಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News