ಇಂದಿನಿಂದ ಮೂರು ದಿನ ವಿಧಾನಸಭೆ ಕಲಾಪ

ಬೆಂಗಳೂರು, ಮೇ 22: ಸಿದ್ದರಾಮಯ್ಯ ನೇತೃತ್ವದ ಹೊಸ ಸರ್ಕಾರದ ಮೊದಲ ಅಧಿವೇಶನ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿದೆ.

ಮೊದಲ ಎರಡು ದಿನ ನೂತನವಾಗಿ ಆಯ್ಕೆಗೊಂಡಿರುವ ಎಲ್ಲ ಶಾಸಕರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಹಾಗೂ ಕೊನೆಯ ದಿನ ಹೊಸ ವಿಧಾನಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಕಾಂಗ್ರೆಸ್ ಹಿರಿಯ ನಾಯಕರಾಗಿರುವ ಹೆಚ್​ ಕೆ ಪಾಟೀಲ್ ಅವರ ಹೆಸರು ಸಹ ಸ್ಪೀಕರ್ ಪಟ್ಟಿಯಲ್ಲಿದೆ.

ಇಂದು ಬೆಳಗ್ಗೆ 11 ಗಂಟೆಗೆ ಅಧಿವೇಶನ ಪ್ರಾರಂಭವಾಗಲಿದ್ದು, ಶಾಸಕರಿಗೆ ಪ್ರಮಾಣ ವಚನ ಬೋಧಿಸಲು ಹಂಗಾಮಿ ಸಭಾಧ್ಯಕ್ಷರನ್ನಾಗಿ ಆರ್‌ವಿ ದೇಶಪಾಂಡೆ ಅವರನ್ನು ಈಗಾಗಲೇ ನಿಯೋಜಿಸಲಾಗಿದೆ.

You cannot copy content from Baravanige News

Scroll to Top