Wednesday, May 1, 2024
Homeಸುದ್ದಿರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ ಸರಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ ಸರಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಕಾರ್ಕಳ ಶಾಖೆ ವತಿಯಿಂದ ಸರಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

2021-22 ಮತ್ತು 2022-23ನೇ ಶೈಕ್ಷಣಿಕ ಸಾಲಿನಲ್ಲಿ ಎಸ್ಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 95 ಕ್ಕಿಂತ ಅಧಿಕ ಮತ್ತು ಯಾವುದೇ ಪದವಿಯ ಅಂತಿಮ ಪರೀಕ್ಷೆಯಲ್ಲಿ ಶೇ. 75 ಅಂಕ ಪಡೆದ ಇಬ್ಬರಿಗೆ ನಗದು ಪುರಸ್ಕಾರದೊಂದಿಗೆ ಸನ್ಮಾನಿಸಲಾಗುತ್ತದೆ. ಸ್ನಾತಕೋತ್ತರ ಪದವಿ ಪಡೆದವರಿಗೆ ಅವಕಾಶವಿರುವುದಿಲ್ಲ. ಅರ್ಹ ವಿದ್ಯಾರ್ಥಿಗಳು ದೃಢೀಕರಣ ಅಂಕಪಟ್ಟಿ, ಮೊಬೈಲ್ ಸಂಖ್ಯೆ, ಇತ್ತೀಚಿನ ಭಾವಚಿತ್ರ ಹಾಗೂ ತಂದೆ ತಾಯಿ ಸರಕಾರಿ ನೌಕರರಾಗಿ ಕಾರ್ಯ ನಿರ್ವಹಿಸುತ್ತಿರುವ ಕಚೇರಿಯಿಂದ ಸೇವಾ ದೃಢೀಕರಣದೊಂದಿಗೆ ಅರ್ಜಿ ಸಲ್ಲಿಸುವುದು. ವಿಶೇಷ ಸಾಧನೆ ಮಾಡಿದ ನೌಕರರಿಗೆ ಮತ್ತು ಅವರ ಮಕ್ಕಳಿಗೆ ಪುರಸ್ಕಾರ ಹಾಗೂ 2022 ಆಗಸ್ಟ್‌ನಿಂದ ಮೇ 31 ರ ಒಳಗೆ ಸರಕಾರಿ ಸೇವೆಯಿಂದ ನಿವೃತ್ತರಾದ ನೌಕರರಿಗೆ ಸನ್ಮಾನ ಇರುವುದರಿಂದ ವಿದ್ಯಾರ್ಥಿಗಳ ವಿವರ ಮತ್ತು ನಿವೃತ್ತ ನೌಕರರ ವಿವರವನ್ನು ಜೂ. 16 ರೊಳಗೆ ನೌಕರರ ಸಂಘದ ಕಚೇರಿಗೆ ಅಥವಾ ಸಂಘದ ಪದಧಿಕಾರಿಗಳಲ್ಲಿ ನೀಡುವುದು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News