Saturday, July 27, 2024
Homeಸುದ್ದಿಕಾಪು: ಕಡಲ್ಕೊತೆರ ಪ್ರದೇಶಗಳಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ, ಪರಿಶೀಲನೆ

ಕಾಪು: ಕಡಲ್ಕೊತೆರ ಪ್ರದೇಶಗಳಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ, ಪರಿಶೀಲನೆ

ಕಾಪು, ಜೂ.16: ವಿಧಾನಸಭಾ ಕ್ಷೇತ್ರದ ಕಾಪು ಪುರಸಭಾ ವ್ಯಾಪ್ತಿಯ ಮೂಳೂರು, ಪೊಲಿಪು, ಕೈಪುಂಜಾಲು ಭಾಗದಲ್ಲಿ ಕಡಲ್ಕೊರೆತ ಉಂಟಾಗಿದ್ದು, ಈ ಪ್ರದೇಶಗಳಿಗೆ ಜೂ.15 ರ ಗುರುವಾರ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಕಡಲ್ಕೊರೆತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಳೆಗಾಲದಲ್ಲಿ ಕಡಲ ಕೊರೆತದ ಸಮಸ್ಯೆ ಅಧಿಕವಾಗಲಿರುವುದರಿಂದ ಇದಕ್ಕೆ ಬೇಕಾದ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ಸತೀಶ್ಚಂದ್ರ, ರಾಧಿಕಾ, ಕಿರಣ್ ಆಳ್ವ, ಅನಿಲ್ ಕುಮಾರ್, ಅರುಣ್ ಶೆಟ್ಟಿ ಹಾಗೂ ಬಂದರು ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಶ್ರೀನಿವಾಸ್, ಸಹಾಯಕ ಅಭಿಯಂತರರಾದ ಜಯರಾಜ್, ಪುರಸಭೆಯ ಮುಖ್ಯ ಅಧಿಕಾರಿಗಳಾದ ಸಂತೋಷ್, ಸುಧೀರ್ ಶೆಟ್ಟಿ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News