Monday, April 15, 2024
Homeಸುದ್ದಿಮಣ್ಣಿನ ರಕ್ಷಣೆಯ ಕುರಿತು ಜಾಗೃತಿ ಯಾತ್ರೆ : ಉಡುಪಿಗೆ ತಲುಪಿದ ಯುವಕ

ಮಣ್ಣಿನ ರಕ್ಷಣೆಯ ಕುರಿತು ಜಾಗೃತಿ ಯಾತ್ರೆ : ಉಡುಪಿಗೆ ತಲುಪಿದ ಯುವಕ

ಉಡುಪಿ : ಮಣ್ಣಿನ ರಕ್ಷಣೆಯ ಕುರಿತು ಜಾಗೃತಿ ಮಾಡುವ ಸಲುವಾಗಿ ಯುವಕನೊಬ್ಬ ಭಾರತ ಯಾತ್ರೆ ಕೈಗೊಂಡಿದ್ದಾರೆ. ಇನ್ನೂ 17ರ ಹರೆಯದ ಈ ಯುವಕ ಈಗಾಗಲೇ ಸಾವಿರಾರು ಕಿಲೋಮೀಟರ್ ಸಂಚರಿಸಿ ಉಡುಪಿಗೆ ಬಂದು ತಲುಪಿದ್ದಾರೆ.ಸಾಹಿಲ್ ಅವರು ಏಕಾಂಗಿಯಾಗಿ ಸೈಕಲ್ ಸವಾರಿ ಮಾಡುತ್ತಿದ್ದಾರೆ. ಒಟ್ಟು ಎರಡು ವರ್ಷಗಳ ಕಾಲ ಅವರ ಈ ಸುಧೀರ್ಘ ಯಾತ್ರೆ ನಡೆಯಲಿದೆ. ಸದ್ಯ 6 ತಿಂಗಳ ಯಾತ್ರೆ ಪೂರೈಸಿದ್ದು ಇನ್ನೂ 18 ತಿಂಗಳು ದೇಶ ಸುತ್ತುವುದು ಬಾಕಿ ಇದೆ.ಮುಂದಿನ ದಿನಗಳಲ್ಲಿ ಮಹಾರಾಷ್ಟ್ರ ಗುಜರಾತ್ ಸಹಿತ ದೇಶದ ಬಾಕಿ ಉಳಿದ ಎಲ್ಲಾ ರಾಜ್ಯಗಳನ್ನು ಸಂದರ್ಶಿಸಿ ಬಳಿಕ ಕೊಲ್ಕತ್ತಾದಲ್ಲಿ ಈ ಭಾರತ ದರ್ಶನ ಯಾತ್ರೆ ಸಮಾಪನಗೊಳ್ಳಲಿದೆ.ಉಡುಪಿ ಸಂಚಾರದ ವೇಳೆ ಮಣಿಪಾಲದ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಹಾತ್ಮ ಗಾಂಧಿ ಮೆಮೊರಿಯಲ್ ಕಾಲೇಜು, ಆನಂದತೀರ್ಥ ವಿದ್ಯಾಲಯ, ಇನಾಯತ್ ಆರ್ಟ್ ಗ್ಯಾಲರಿ ಮೊದಲಾದ ಸ್ಥಳಗಳಿಗೆ ಸಾಹಿಲ್ ಭೇಟಿ ನೀಡಿ ಮಣ್ಣಿನ ರಕ್ಷಣೆಯ ಬಗ್ಗೆ ಜನರಿಗೆ ಮಾಹಿತಿ ನೀಡುತ್ತಿದ್ದಾರೆ.

ಚಿತ್ರ ಮತ್ತು ಮಾಹಿತಿ ಕೃಪೆ- ಸುವರ್ಣ ನ್ಯೂಸ್
RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News