ಶಿರ್ವ : ಸಾರ್ವಜನಿಕ ಶ್ರೀ ಶಾರದೋತ್ಸವ ಸೇವಾ ಸಮಿತಿ, ಶಿರ್ವ ವತಿಯಿಂದ ಪ್ರಥಮ ಬಾರಿಯ ಶ್ರೀ ಶಾರದಾ ಮಹೋತ್ಸವ, ಮಹಾ ಅನ್ನಸಂತರ್ಪಣೆ ಮತ್ತು ಶ್ರೀ ಶಾರದಾ ಮಾತೆಯ ವೈಭವದ ಶೋಭಾಯಾತ್ರೆ ಅಕ್ಟೋಬರ್ 05, ಬುಧವಾರದ ವಿಜಯದಶಮಿಯಂದು ಶಿರ್ವದ ಸಾರ್ವಜನಿಕ ಶ್ರೀ ಗಣೇಶೋತ್ಸವ ವೇದಿಕೆಯಲ್ಲಿ ನಡೆಯಲಿದೆ.
ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 9ರವರೆಗೆ ಸಮಸ್ತ ಹಿಂದೂ ಬಾಂಧವರ ಸಹಭಾಗಿತ್ವದಲ್ಲಿ ಶ್ರೀ ಶಾರದಾ ಮಹೋತ್ಸವ ಹಾಗೂ ಅಪರಾಹ್ನ 1ಕ್ಕೆ ಸರಿಯಾಗಿ ಅನ್ನಸಂತರ್ಪಣೆ ನಡೆಯಲಿದೆ. ಸಾಯಂಕಾಲ 5 ಗಂಟೆಯಿಂದ ಶ್ರೀ ಶಾರದಾ ಮಾತೆಯ ವೈಭವದ ಶೋಭಾಯಾತ್ರೆ ನಡೆಯಲಿದೆ ಎಂದು ಅಧ್ಯಕ್ಷರು ತಿಳಿಸಿದ್ದಾರೆ.
ಇದೇ ದಿನ ಮಧ್ಯಾಹ್ನ 12.30ಗೆ ಸರಿಯಾಗಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಶ್ರೀ ಹರಿಪ್ರಸಾದ್ ಸಾಲಿಯಾನ್ ಕೋಡು ಅಧ್ಯಕ್ಷತೆಯಲ್ಲಿ, ಹಲವು ಗಣ್ಯರ ಸಮ್ಮುಖದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ.
ಮಧ್ಯಾಹ್ನ 1.30ಯಿಂದ ಶ್ರೀ ವಿನಾಯಕ ಯಕ್ಷಕಲಾ ತಂಡ(ರಿ) ಕೆರೆಕಾಡು ಇವರಿಂದ ಶಂಕರಿ ಬನಶಂಕರಿ ಯಕ್ಷಗಾನ ಬಯಲಾಟವೂ ನಡೆಯಲಿದ್ದು ಎಲ್ಲಾ ಕಾರ್ಯಕ್ರಮದಲ್ಲೂ ಭಕ್ತರು ಪಾಲ್ಗೊಳ್ಳಬೇಕೆಂದು ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
![](https://i0.wp.com/wordpress-885334-3069229.cloudwaysapps.com/wp-content/uploads/2022/09/IMG-20220920-WA0038-819x1024-optimized.jpg?resize=696%2C870&ssl=1)