ಉಡುಪಿ : ಜಿಲ್ಲೆಗೆ ಆಗಮಿಸಿದ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ನಿರ್ಮಲ ಸೀತಾರಾಮನ್ ರನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಮೀನುಗಾರರ ನಿಯೋಗ ಹಾಗೂ ನೇಕಾರರ ನಿಯೋಗ ಸಚಿವರನ್ನು ಭೇಟಿ ಮಾಡಿ ಮೀನುಗಾರಿಕೆ ಹಾಗೂ ನೇಕಾರರ ವಿವಿಧ ಬೇಡಿಕೆಗಳ ಬಗ್ಗೆ ಚರ್ಚಿಸಿ ಸಹಕಾರ ಕೋರಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ ಕೂರ್ಮಾ ರಾವ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ, ಮೀನುಗಾರ ಮುಖಂಡರಾದ ದಯಾನಂದ ಸುವರ್ಣ, ಜಯ ಸಿ. ಕೋಟ್ಯಾನ್, ರಾಮಚಂದ್ರ ಕುಂದರ್, ಕಿಶೋರ್ ಡಿ. ಸುವರ್ಣ, ನೇಕಾರರ ನಿಯೋಗದ ಮುಖಂಡರಾದ ರತ್ನಾಕರ ಇಂದ್ರಾಳಿ, ಜಗದೀಶ್ ಶೆಟ್ಟಿಗಾರ್, ಮಂಜುನಾಥ ಮಣಿಪಾಲ ಮೊದಲಾದ ಗಣ್ಯರು ಉಪಸ್ಥಿತರಿದ್ದರು.
![](https://i0.wp.com/www.baravanige.com/wp-content/uploads/2023/07/IMG-20230714-WA0032-optimized.jpg?resize=696%2C315&ssl=1)
![](https://i0.wp.com/www.baravanige.com/wp-content/uploads/2023/07/IMG-20230714-WA0035-optimized.jpg?resize=696%2C522&ssl=1)
![](https://i0.wp.com/www.baravanige.com/wp-content/uploads/2023/07/IMG-20230714-WA0034-optimized.jpg?resize=696%2C522&ssl=1)
![](https://i0.wp.com/www.baravanige.com/wp-content/uploads/2023/07/IMG-20230714-WA0032-1-optimized.jpg?resize=696%2C315&ssl=1)