ಕಾರ್ಕಳ: ವಿದ್ಯುತ್ ಸ್ಪರ್ಶಿಸಿ ಬಿಹಾರ ಮೂಲದ ಕಾರ್ಮಿಕ ಮೃತ್ಯು

ಕಾರ್ಕಳ, ಜು 15: ಬಿಹಾರ ಮೂಲದ ಕೂಲಿ ಕಾರ್ಮಿಕ ಯುವಕನೋರ್ವ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ದಾರುಣ ಘಟನೆ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಸೌರವ್ ಕುಮಾರ್ (20) ಮೃತ ಯುವಕ. ಕೆಲ ವರ್ಷಗಳ ಹಿಂದೆ ದಿನಗೂಲಿ ಕಾರ್ಮಿಕನಾಗಿ ನಿಟ್ಟೆಗೆ ಬಂದಿದ್ದ ಇವರು ನಿಟ್ಟೆ ಕಾಲೇಜಿನ ಎದುರಿನ ಬಾಡಿಗೆ ಕೊಠಡಿಯಲ್ಲಿ ವಾಸವಾಗಿದ್ದರು. ಈತ ಹಾಗೂ ಈತನ ಸ್ನೇಹಿತರು ವಾಸಿಸುತ್ತಿದ್ದ ಕಟ್ಟಡದ ಆಸುಪಾಸಿನಲ್ಲಿ ಮಂಗಗಳ ಕಾಟ ಹೆಚ್ಚಾಗಿತ್ತು. ಅವರು ತಂಗಿದ್ದ ಜಾಗದಿಂದ ಮಂಗಗಳು ಸಾಬೂನು, ಬಟ್ಟೆ ಇತ್ಯಾದಿಗಳನ್ನು ತೆಗೆದುಕೊಂಡು ಬೇರೆಡೆ ಹಾಕುತ್ತಿದ್ದವು.

ಶುಕ್ರವಾರವೂ ಕೆಲವು ವಸ್ತುಗಳು ಕಾಣಿಸುತ್ತಿರಲಿಲ್ಲ. ಹೀಗಾಗಿ, ಯುವಕರು ಕಾಣೆಯಾದ ವಸ್ತುಗಳನ್ನು ಹುಡುಕಲು ಟೆರೇಸ್‌ಗೆ ಹೋಗುವ ಸಲುವಾಗಿ ಏಣಿಯನ್ನು ಎತ್ತಿದ್ದಾಗ ವಿದ್ಯುತ್ ತಂತಿ ಏಣಿಗೆ ತಗುಲಿದೆ. ಏಣಿ ಹಿಡಿದಿದ್ದ ಸೌರವ್‌ಗೆ ವಿದ್ಯುತ್ ಸ್ಪರ್ಶವಾಗಿ ಅಲ್ಲೆ ಮೃತಪಟ್ಟಿದ್ದಾನೆ.

ಈ ಸಂಬಂಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You cannot copy content from Baravanige News

Scroll to Top