ಪ್ರಯಾಣಿಕನ ಮೊಬೈಲ್ ಬ್ಲಾಸ್ಟ್; ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ…!!

ಉದಯಪುರದಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವೊಂದರಲ್ಲಿ ಪ್ರಯಾಣಿಕರೊಬ್ಬರ ಮೊಬೈಲ್ ಸ್ಫೋಟಗೊಂಡಿದ್ದು ತಕ್ಷಣವೇ ವಿಮಾನವನ್ನು ವಾಪಸ್ ಉದಯಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.

ಸೋಮವಾರ ಏರ್ ಇಂಡಿಯಾದ ಎಐ470 ವಿಮಾನ ಉದಯಪುರ ವಿಮಾನ ನಿಲ್ದಾಣದಿಂದ ಟೇಕಾಫ್ ಆಗುತ್ತಿದ್ದ ವೇಳೆ ಪ್ರಯಾಣಿಕರೊಬ್ಬರ ಮೊಬೈಲ್ ಬ್ಯಾಟರಿ ಸ್ಫೋಟಗೊಂಡಿದೆ. ತಕ್ಷಣವೇ ವಿಮಾನವನ್ನು ಮತ್ತೆ ಅದೇ ನಿಲ್ದಾಣದಲ್ಲಿ ಇಳಿಸಲಾಗಿದೆ.

ಸದ್ಯ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರೂ ಸುರಕ್ಷಿತವಾಗಿದ್ದಾರೆ. ವಿಮಾನವನ್ನು ಎಲ್ಲಾ ರೀತಿಯ ತಾಂತ್ರಿಕ ತಪಾಸಣೆಗೆ ಒಳಪಡಿಸಲಾಗಿದೆ. ಆದರೆ ಘಟನೆಯ ಬಳಿಕ ಕೆಲ ಪ್ರಯಾಣಿಕರು ವಿಮಾನ ಹತ್ತಲು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ.

You cannot copy content from Baravanige News

Scroll to Top