Saturday, July 27, 2024
Homeಸುದ್ದಿಬೈಂದೂರು | ಬೈಕ್‌ಗಳ ಮಧ್ಯೆ ಅಪಘಾತ: ಓರ್ವ ಸವಾರ ಮೃತ್ಯು

ಬೈಂದೂರು | ಬೈಕ್‌ಗಳ ಮಧ್ಯೆ ಅಪಘಾತ: ಓರ್ವ ಸವಾರ ಮೃತ್ಯು

ಬೈಂದೂರು: ಯಡ್ತರೆ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೆ.20ರಂದು ಸಂಜೆ ವೇಳೆ ಎರಡು ಬೈಕ್‌ಗಳ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸವಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.ಮೃತರನ್ನು ಬೈಕ್ ಸವಾರ ಜಗದೀಶ್ ಪಟ್ವಾಲ್ ಎಂದು ಗುರುತಿಸಲಾಗಿದೆ.

ಇವರ ಪತ್ನಿ ಸಹ ಸವಾರೆ ಆಶಾ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆ ಯುತ್ತಿದ್ದಾರೆ. ಜಗದೀಶ್ ತನ್ನ ಪತ್ನಿ ಜೊತೆ ಬೈಕಿನಲ್ಲಿ ಬಿಜೂರು ಕಡೆಯಿಂದ ಬಂದು ಕೊಲ್ಲೂರು ರಸ್ತೆ ಕಡೆಗೆ ಹೋಗಲು ಯಡ್ತರೆ ಜಂಕ್ಷನ್ ಬಳಿ ತಿರುಗಿ ಸುತ್ತಿದ್ದು, ಈ ವೇಳೆ ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಬರುತ್ತಿದ್ದ ಮುಹಮ್ಮದ್ ಇಬ್ರಾಹಿಂ ಎಂಬವರ ಬೈಕ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಜಗದೀಶ್ ಪಟ್ವಾಲ್ ಹಾಗೂ ಅವರ ಪತ್ನಿ ರಸ್ತೆ ಬಿದ್ದರೆನ್ನಲಾಗಿದೆ. ಇದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಜಗದೀಶ್, ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ

RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News