Saturday, April 20, 2024
Homeಸುದ್ದಿಶಿರ್ವ : ರಸ್ತೆ ದಾಟಲು ನಿಂತಿದ್ದವರಿಗೆ ಬೈಕ್ ಡಿಕ್ಕಿ - ತಂದೆ ಮೃತ್ಯು, ಮಗ ಗಂಭೀರ

ಶಿರ್ವ : ರಸ್ತೆ ದಾಟಲು ನಿಂತಿದ್ದವರಿಗೆ ಬೈಕ್ ಡಿಕ್ಕಿ – ತಂದೆ ಮೃತ್ಯು, ಮಗ ಗಂಭೀರ

ಶಿರ್ವ: ಸೆ 22: ರಸ್ತೆ ದಾಟಲು ನಿಂತಿದ್ದ ತಂದೆ ಮಗನಿಗೆ ಬೈಕ್ ಡಿಕ್ಕಿ ಹೊಡೆದು ತಂದೆ ಮೃತಪಟ್ಟು, ಮಗ ಗಂಭೀರ ಸ್ಥಿತಿಯಲ್ಲಿರುವ ಘಟನೆ ಶಿರ್ವದ ಬಂಟಕಲ್ಲು ಪೇಟೆಯ ಆಶಾ ಕಾಂಪ್ಲೆಕ್ಸ್ ಬಳಿ ನಡೆದಿದೆ.

ಬಾಗಲಕೋಟೆ ಮೂಲದ ಶರಣಪ್ಪ ಬಾಳಪ್ಪ ಗಂಜಿಹಾಳ(40) ಮೃತಪಟ್ಟವರು, ಶ್ರವಣ ಕುಮಾರ (6) ಅಪಘಾತದಲ್ಲಿ ಗಾಯಗೊಂಡವರು.

ಶರಣಪ್ಪ ತನ್ನ ಪುತ್ರನೊಂದಿಗೆ ಬುಧವಾರ ರಾತ್ರಿ 7 ಗಂಟೆಗೆ ದಿನಸಿ ತರಲು ಬಂಟಕಲ್ ಪೇಟೆಯ ಆಶಾ ಕಾಂಪ್ಲೆಕ್ಸ್ ಎದುರುಗಡೆ ರಸ್ತೆಯ ಬಳಿ ನಿಂತಿದ್ದರು.ಆಗ ಶಂಕರಪುರ ಕಡೆಯಿಂದ ವೇಗವಾಗಿ ಬಂದ ಬೈಕ್ ಸವಾರ ಇವರಿಗೆ ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಇಬ್ಬರನ್ನೂ ಸಾರ್ವಜನಿಕರು ಉಡುಪಿ ಆಸ್ಪತ್ರೆಗೆ ದಾಖಲಿಸಿದ್ದರು.ಆದರೆ ತಲೆಗೆ ಗಂಭೀರ ಪೆಟ್ಟಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ತಂದೆ ಮೃತ ಪಟ್ಟಿದ್ದಾರೆ. ಮಗ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಡಿಕ್ಕಿ ಹೊಡೆದ ಬೈಕ್ ಸವಾರನು ಸ್ಥಳದಲ್ಲೇ ಬೈಕ್ ಬಿಟ್ಟು ಪರಾರಿಯಾಗಿದ್ದು, ಈ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News