Saturday, July 27, 2024
Homeಸುದ್ದಿಶೀಲದ ಬಗ್ಗೆ ಸಂಶಯಪಟ್ಟು ಪತ್ನಿಯನ್ನು ಕೊಲೆಗೈದ ಪತಿ

ಶೀಲದ ಬಗ್ಗೆ ಸಂಶಯಪಟ್ಟು ಪತ್ನಿಯನ್ನು ಕೊಲೆಗೈದ ಪತಿ

ಮಂಡ್ಯ, ಆ.17: ಸಂಶಯ ಪಿಶಾಚಿ ಪತಿಯೊಬ್ಬ ಪತ್ನಿಯ ಶೀಲದ ಬಗ್ಗೆಯೇ ಸಂಶಯಪಟ್ಟು ಆಕೆಯನ್ನು ಕೊಲೆಗೈದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದ ಟಿಬಿ ಬಡಾವಣೆಯಲ್ಲಿ ನಡೆದಿದೆ.

ಮಧುಶ್ರೀ (25) ಕೊಲೆಯಾದ ಪತ್ನಿ, ಮಂಜುನಾಥ್ ಕೊಲೆಗೈದ ಪಾಪಿ ಪತಿ.

ದಂಪತಿ ಒಂದೂವರೆ ವರ್ಷದಿಂದ ನಾಗಮಂಗಲದ ಟಿಬಿ ಬಡಾವಣೆಯಲ್ಲಿ ವಾಸ್ತವ್ಯವಿದ್ದರು. ಮಂಜುನಾಥ್ ಬೆಂಗಳೂರಿನಲ್ಲಿ ಕೆಲಸದಲ್ಲಿದ್ದ. ವಾರದಲ್ಲಿ 2 ಬಾರಿ ಮನೆಗೆ ಬರುತ್ತಿದ್ದ. ಮಂಗಳವಾರ ಮಧ್ಯಾಹ್ನ ಮಂಜುನಾಥ್ ಮನೆಗೆ ಬಂದಿದ್ದ. ಈ ವೇಳೆ ಮಂಜುನಾಥ್ ಪತ್ನಿ ಮಧುಶ್ರೀಯೊಂದಿಗೆ ಜಗಳ ತೆಗೆದಿದ್ದಾನೆ. ಪತ್ನಿಯ ಶೀಲವನ್ನು ಶಂಕಿಸಿ ತಾನೇ ಜಗಳ ಆರಂಭಿಸಿದ್ದ ಮಂಜುನಾಥ್ ಕೊನೆಗೆ ಆಕೆಯನ್ನು ಕೊಂದು ಪರಾರಿಯಾಗಿದ್ದಾನೆ. ಈ ದಂಪತಿಗೆ ನಾಲ್ಕು ವರ್ಷ ಗಂಡು ಮಗುವಿದೆ. ಇದೀಗ ಮಗು ಅನಾಥವಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News