Wednesday, April 24, 2024
Homeಸುದ್ದಿಗಂಗೊಳ್ಳಿ: ದುರ್ಗಾ ದೌಡ್ ಬ್ಯಾನರ್ ಹರಿದ ಕಿಡಿಗೇಡಿಗಳು

ಗಂಗೊಳ್ಳಿ: ದುರ್ಗಾ ದೌಡ್ ಬ್ಯಾನರ್ ಹರಿದ ಕಿಡಿಗೇಡಿಗಳು

ಗಂಗೊಳ್ಳಿ ಸೆ.22: ಬೈಂದೂರಿನ ಗಂಗೊಳ್ಳಿಯಲ್ಲಿ ಎಸ್.ಡಿ.ಪಿ.ಐ ಕಚೇರಿ ಹಿಂಬಾಗ ಹಿಂದೂ ಜಾಗರಣ ವೇದಿಕೆ ಅಳವಡಿಸಿದ್ದ ದುರ್ಗಾ ದೌಡ್ ಬ್ಯಾನರ್ ನ್ನು ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ಸ್ಥಳಕ್ಕೆ ಗಂಗೊಳ್ಳಿ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಕ್ಟೋಬರ್ 2 ರಂದು ಉಡುಪಿಯಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ನಡೆಯಲಿರುವ ದುರ್ಗಾ ದೌಡ್ ಕಾರ್ಯಕ್ರಮಕ್ಕೆ ಶುಭಕೋರಿ ಗಂಗೊಳ್ಳಿ ಠಾಣಾ ವ್ಯಾಪ್ತಿಯ ಗಂಗೊಳ್ಳಿ- ಮೇಲ್ ಗಂಗೊಳ್ಳಿ ದಾಕುಹಿತ್ಲು ಹೋಗುವ ಮಾರ್ಗ ದಲ್ಲಿ ಬ್ಯಾನರ್ ಅಳವಡಿಸಲಾಗಿತ್ತು.

ಇದೀಗ ಈ ಬ್ಯಾನರ್ ನ್ನು ಕಿಡಿಗೇಡಿಗಳು ಹರಿದು ಹಾಕಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News