Monday, April 29, 2024
Homeಸುದ್ದಿಕರಾವಳಿಹಿಂಜಾವೇ ಮುಖಂಡ ಸತೀಶ್ ದಾವಣಗೆರೆ ಬಂಧನ ಖಂಡಿಸಿ ನಗರದಲ್ಲಿ ಹಿಂಜಾವೇ‌ ಕಾರ್ಯಕರ್ತರಿಂದ ಪ್ರತಿಭಟನೆ

ಹಿಂಜಾವೇ ಮುಖಂಡ ಸತೀಶ್ ದಾವಣಗೆರೆ ಬಂಧನ ಖಂಡಿಸಿ ನಗರದಲ್ಲಿ ಹಿಂಜಾವೇ‌ ಕಾರ್ಯಕರ್ತರಿಂದ ಪ್ರತಿಭಟನೆ

ಉಡುಪಿ : ಹಿಂದು ಜಾಗರಣ ವೇದಿಕೆಯ ಮುಖಂಡ ಸತೀಶ್ ದಾವಣಗೆರೆ ಅವರ ಬಂಧನ ಖಂಡಿಸಿ ಉಡುಪಿ ಹಿಂದು ಜಾಗರಣ ವೇದಿಕೆಯ ವತಿಯಿಂದ ಅಜ್ಜರಕಾಡು ಹುತಾತ್ಮರ ಸ್ಮಾರಕರದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.



ಹಿಂಜಾವೇ ಮುಖಂಡ ರಿಕೇಶ್ ಪಾಲನ್ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಅಲ್ಪಸಂಖ್ಯಾತರನ್ನು ಒಲೈಸುವ ರಾಜಕಾರಣ ಮಾಡುತ್ತಿದೆ. ಡಿಜೆ ಹಳ್ಳಿ ಕೆಜೆ ಹಳ್ಳಿಯ ಪ್ರಕರಣದ ಆರೋಪಿಗಳ ಮೇಲಿನ ಕೇಸ್ ಗಳನ್ನು ಹಿಂಪಡೆಯುವ ಕೆಲಸ ಮಾಡುತ್ತಿದೆ. ಆದ್ರೆ ಹಿಂದೂ ಕಾರ್ಯಕರ್ತರನ್ನು ಬಂಧಿಸುವುದು. ಅವರ ಮೇಲೆ ವಿನಾ ಕಾರಣ ಕೇಸ್ ದಾಖಲಿಸುವುದು. ಅಲ್ಲದೆ, ಸಂಘಟನೆಯ ಕೆಲಸಗಳಿಗೆ ತೊಂದರೆ ಮಾಡಲಾಗುತ್ತಿದೆ. ಆ ಮೂಲಕ ಸಿದ್ದರಾಮಯ್ಯ ಸರಕಾರ ಹಿಂದೂ ಕಾರ್ಯಕರ್ತರನ್ನು ದಮನಿಸುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಂದೂ ಕಾರ್ಯಕರ್ತರ ಮೇಲೆ ಇದೇ ರೀತಿ ದೌರ್ಜನ್ಯ ಮುಂದುವರಿದೆ ಕಾಂಗ್ರೆಸ್ ಸರಕಾರದ ವಿರುದ್ಧ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಹಿಂಜಾವೇ ಮುಖಂಡರಾದ ಶ್ರೀಕಾಂತ್ ಶೆಟ್ಟಿ ಕಾರ್ಕಳ, ಗುರುಪ್ರಸಾದ್ ಸೂಡ, ಶಂಕರ್ ದೇವಾಡಿಗ ಕೋಟ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News