Saturday, May 4, 2024
Homeಸುದ್ದಿಕರಾವಳಿಉಡುಪಿ: ಬಿಜೆಪಿಯವರಿಂದಲೇ ಸ್ವಪಕ್ಷದ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ

ಉಡುಪಿ: ಬಿಜೆಪಿಯವರಿಂದಲೇ ಸ್ವಪಕ್ಷದ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ

ಉಡುಪಿ : ಬಿಜೆಪಿಯವರಿಂದಲೇ ಸ್ವಪಕ್ಷದ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಮುದ್ದೂರು ಎಂಬಲ್ಲಿ ನಡೆದಿದೆ.

ನೆಂಚಾರು ನಿವಾಸಿ ಪ್ರಭಾಕರ ಪೂಜಾರಿ (51) ಹಲ್ಲೆಗೆ ಒಳಗಾದ ಬಿಜೆಪಿ ಕಾರ್ಯಕರ್ತ.

ಸ್ಥಳೀಯ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ಗೆ ನೆರವು ನೀಡಿದ್ದಾರೆ ಎಂದು ಆರೋಪಿಸಿ ಹಲ್ಲೆ ಮಾಡಿದ್ದಾರೆ ಎನ್ನಲಾಗುತ್ತಿದೆ.

ಬಿಜೆಪಿ ಮುಖಂಡರಾದ ಪ್ರತಾಪ್ ಹೆಗ್ಡೆ, ಹರೀಶ್, ದಿನೇಶ್ ಮತ್ತು ಗಣೇಶ್ ಎಂಬುವರಿಂದ ಕೃತ್ಯವೆಸಗಲಾಗಿದೆ. ನೆಂಚಾರು ಹಾಲು ಡೈರಿಗೆ ಹಾಲು ನೀಡಲು ಬಂದಿದ್ದ ಪ್ರಭಾಕರ ಪೂಜಾರಿಯನ್ನು ಬೆಳಗಿನ ಜಾವ 4 ಘಂಟೆಗೆ ಅಪಹರಿಸಲಾಗಿದೆ.

ಬಳಿಕ ಬಿಜೆಪಿ ಮುಖಂಡ ಪ್ರತಾಪ್ ಹೆಗ್ಡೆ ಕಚೇರಿಯಲ್ಲಿ ವಿದ್ಯುತ್ ತಂತಿಯಿಂದ ಮಾರಣಾಂತಿಕ ಹಲ್ಲೆ ಮಾಡಿ ಸಂಜೆಯವರೆಗೂ ಕಚೇರಿಯಲ್ಲಿ ಕೂಡಿಹಾಕಿದ್ದಾರೆ. ಗಂಭೀರವಾಗಿ ಹಲ್ಲೆಗೊಳಗಾಗಿದ್ದ ಪ್ರಭಾಕರ ಪೂಜಾರಿಯನ್ನು ಅವರ ಪತ್ನಿ ಉಡುಪಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಮೊದಲಿನಿಂದಲೂ ಬಿಜೆಪಿಯ ಕಾರ್ಯಕರ್ತರಾಗಿ ಇದ್ದ ಪ್ರಭಾಕರ ಪೂಜಾರಿ, ಬಿಜೆಪಿ ಮುಖಂಡ ಪ್ರತಾಪ್ ಹೆಗ್ಡೆಯವರ ಜೊತೆಗೆ ಇದ್ದ ಪ್ರಭಾಕರ ಪೂಜಾರಿಗೆ ಅವರ ತಂಡದಿಂದಲ ಹಲ್ಲೆ ಮಾಡಲಾಗಿದೆ. ಹಲ್ಲೆಯ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಭಾಕರ ಪೂಜಾರಿ ಪ್ರಕರಣ ದಾಖಲಿಸಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News