Sunday, May 5, 2024
Homeಸುದ್ದಿಕರಾವಳಿಮಂಗಳೂರು:‌ ಯುವಕನಿಗೆ ಚೂರಿ ಇರಿತ ಪ್ರಕರಣ - ಮೂವರು ವಶಕ್ಕೆ

ಮಂಗಳೂರು:‌ ಯುವಕನಿಗೆ ಚೂರಿ ಇರಿತ ಪ್ರಕರಣ – ಮೂವರು ವಶಕ್ಕೆ

ಮಂಗಳೂರು : ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಕಳವಾರು ಎಂಬಲ್ಲಿ ಯುವಕನೋರ್ವನ ಮೇಲೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಸುರತ್ಕಲ್‌ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತರನ್ನು ಕಳವಾರು ಬೆಂಕಿನಾಥೇಶ್ವರ ದೇವಸ್ಥಾನ ಬಳಿಯ ನಿವಾಸಿ ಪ್ರಶಾಂತ್‌ ಯಾನೆ ಪಚ್ಚು(28), ಕಳವಾರು ಆಶ್ರಯಕಾಲನಿ ನಿವಾಸಿ ಧನರಾಜ್(23) ಮತ್ತು ಕಳವಾರು ಚರ್ಚ್‌ ಗುಡ್ಡೆ ಸೈಟ್‌ ನಿವಾಸಿ ಯಜ್ಞೇಶ್‌(22) ಎಂದು ಗುರುತಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಕೆಲವು ಆರೋಪಿಗಳಿದ್ದು, ಉಳಿದವರಿಗಾಗಿ ಸುರತ್ಕಲ್‌ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.

ಸೆ.3ರ ಭಾನುವಾರ ಸುರತ್ಕಲ್‌ ನ ಕಳವಾರಿನಲ್ಲಿ ರಾತ್ರಿ ಶಾಂತಿಗುಡ್ಡೆ ನಿವಾಸಿ ಸಫ್ಘಾನ್ ಎಂಬಾತನಿಗೆ ಚೂರಿ ಇರಿದ ಘಟನೆ ನಡೆದಿತ್ತು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News