Saturday, July 27, 2024
Homeಸುದ್ದಿಸರ್ವರಿಗೂ ಗಣೇಶ ಹಬ್ಬದ ಶುಭಾಶಯ ಕೋರಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್; ಮಕ್ಕಳ ಸುರಕ್ಷತೆಗೆ ಗಮನವಿರಲಿ ಎಂದು...

ಸರ್ವರಿಗೂ ಗಣೇಶ ಹಬ್ಬದ ಶುಭಾಶಯ ಕೋರಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್; ಮಕ್ಕಳ ಸುರಕ್ಷತೆಗೆ ಗಮನವಿರಲಿ ಎಂದು ಮನವಿ

ಬೆಳಗಾವಿ, ಸೆ.18: ಗಣೇಶ ಹಬ್ಬ ಸರ್ವರಿಗೂ ಸನ್ಮಂಗಳವನ್ನುಂಟು ಮಾಡಲಿ. ಎಲ್ಲರ ಬಾಳಲ್ಲಿ ನೆಮ್ಮದಿ ತರಲಿ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಾರ್ಥಿಸಿದ್ದಾರೆ.
ಈ ಕುರಿತು ಸಂದೇಶ ನೀಡಿರುವ ಅವರು, ಹಬ್ಬದ ಆಚರಣೆ ಸಂದರ್ಭದಲ್ಲಿ ಮಕ್ಕಳ ಸುರಕ್ಷತೆಯ ಕುರಿತು ಎಚ್ಚರವಿರಲಿ ಎಂದು ಪಾಲಕರಲ್ಲಿ ಮನವಿ ಮಾಡಿದ್ದಾರೆ.

ಈ ವರ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರಕಾರ ಜನರ ಬಾಳಲ್ಲಿ ನೆಮ್ಮದಿ ತರುವ ಉದ್ದೇಶದಿಂದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ತನ್ಮೂಲಕ ಶೇ. 80ಕ್ಕಿಂತ ಹೆಚ್ಚು ಕುಟುಂಬಗಳಿಗೆ ಒಂದಿಲ್ಲೊಂದು ಯೋಜನೆಗಳನ್ನು ತಲುಪಿಸುವ ಪ್ರಯತ್ನ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಯೋಜನೆಗಳ ಮೂಲಕ ರಾಜ್ಯದ ಎಲ್ಲ 7 ಕೋಟಿ ಜನರನ್ನೂ ತಲುಪುತ್ತೇವೆ. ಯಾವ ಸರಕಾರ ಬಂದರೆ ನಮಗೇನು' ಎನ್ನುವ ಜನಸಾಮಾನ್ಯರ ಹಿಂದಿನ ಭಾವನೆಯನ್ನು ಹೋಗಲಾಡಿಸಿ, ಎಲ್ಲರಲ್ಲೂಇದು ನಮ್ಮ ಸರಕಾರ’ ಎನ್ನುವ ಭಾವನೆ ಬರುವಂತೆ ನಾವು ನಡೆಯುತ್ತಿದ್ದೇವೆ. ಮುಂದಿನ ದಿನಗಳು ಇನ್ನಷ್ಟು ಆಶಾದಾಯಕವಾಗಿರುತ್ತವೆ ಎನ್ನುವ ಭರವಸೆ ನೀಡುತ್ತ, ಮಳೆ, ಬೆಳೆ ಎಲ್ಲವೂ ಉತ್ತಮವಾಗಿ ಸರ್ವೇ ಜನಾಃ ಸುಖಿನೋ ಭವಂತು ಎನ್ನುವಂತೆ ಎಲ್ಲರೂ ಜೀವನದಲ್ಲಿ ನೆಮ್ಮದಿ ಕಾಣಲಿ ಎಂದು ಆಶಿಸುತ್ತೇನೆ ಎಂದು ಹೆಬ್ಬಾಳಕರ್ ತಿಳಿಸಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News