Saturday, July 27, 2024
Homeಸುದ್ದಿಓವರ್ ಟೇಕ್ ಮಾಡಲು ಹೋದ ಬಸ್ ಚಾಲಕ; ಅಪಘಾತದ ರಭಸಕ್ಕೆ ಬೈಕ್ ಸವಾರರು ಗಂಭೀರ

ಓವರ್ ಟೇಕ್ ಮಾಡಲು ಹೋದ ಬಸ್ ಚಾಲಕ; ಅಪಘಾತದ ರಭಸಕ್ಕೆ ಬೈಕ್ ಸವಾರರು ಗಂಭೀರ

ಮಂಗಳೂರು, ಸೆ.18: ಖಾಸಗಿ ಬಸ್ವೊಂದು ರಸ್ತೆ ದಾಟಲು ನಿಂತಿದ್ದ ಬೈಕ್ ಸವಾರರಿಗೆ ಡಿಕ್ಕಿ ಹೊಡೆದ ಘಟನೆ ಮಂಗಳೂರು‌ ಹೊರವಲಯದ ಸುರತ್ಕಲ್ ನ ಹೊಸ ಬೆಟ್ಟು ಎಂಬಲ್ಲಿ ನಡೆದಿದೆ.

ಓವರ್ ಟೇಕ್ ಮಾಡಲು ಹೋಗಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಹಳೆಯಂಗಡಿ ಬಳಿಯ ಪಕ್ಷಿಕೆರೆ ನಿವಾಸಿ ಮೊಹಮ್ಮದ್ ಶಾಹೀಲ್ (20) ಮತ್ತು ಅರಾಫತ್ (19) ಗಂಭೀರ ಗಾಯಗೊಂಡಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ

ಬಸ್​ ಮಂಗಳೂರಿನಿಂದ ಉಡುಪಿಗೆ ತೆರಳುತ್ತಿತ್ತು. ಡಿವೈಡರ್ ಬಳಿ ಬೈಕ್ ಸವಾರರು ರಸ್ತೆ ದಾಟಲು ಕಾಯುತ್ತಿದ್ದಾಗ ಅತ್ತ ಕಡೆಯಿಂದ ವೇಗವಾಗಿ ಬಂದ ಬಸ್​ ನಿಯಂತ್ರಣಕ್ಕೆ ಸಿಗದೆ ಡಿಕ್ಕಿ ಹೊಡೆದಿದೆ.
ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಸವಾರನ ನಿರ್ಲಕ್ಷದ ಚಾಲನೆ ಈ ಅಪಫಾತ ಸಂಭವಿಸಿದೆ ಎನ್ನಲಾಗುತ್ತಿದೆ.

ಬಸ್​ ವೇಗವಾಗಿ ಬಂದು ಸಂಭವಿಸುವ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News