Saturday, July 27, 2024
Homeಸುದ್ದಿಉಡುಪಿ: ಚೈತ್ರಾ ವಿರುದ್ದ ಮತ್ತೊಂದು ವಂಚನೆ ಪ್ರಕರಣ ಬಯಲಿಗೆ; ಅಳಲು ತೋಡಿಕೊಂಡ ಯುವಕ

ಉಡುಪಿ: ಚೈತ್ರಾ ವಿರುದ್ದ ಮತ್ತೊಂದು ವಂಚನೆ ಪ್ರಕರಣ ಬಯಲಿಗೆ; ಅಳಲು ತೋಡಿಕೊಂಡ ಯುವಕ

ಉಡುಪಿ, ಸೆ.19: ಬಟ್ಟೆ ಅಂಗಡಿಯನ್ನು ತೆರೆದುಕೊಂಡುವುದಾಗಿ ನಂಬಿಸಿ ಐದು ಲಕ್ಷ ರೂಪಾಯಿ ವಂಚನೆ ಮಾಡಿದ್ದಾರೆ ಎಂಬ ಮತ್ತೊಂದು ಆರೋಪ ಚೈತ್ರಾ ಕುಂದಾಪುರ ಮೇಲೆ ಬಂದಿದೆ. ಈ ಕುರಿತು ಕೋಟಾ ಠಾಣೆಯಲ್ಲಿ ಸಂತ್ರಸ್ತರು ದೂರು ನೀಡಿದ್ದು, ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಈಗಾಗಲೇ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ 5 ಕೋಟಿ ವಂಚನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಚೈತ್ರಾ ಕುಂದಾಪುರ ಬಂಧನಕ್ಕೊಳಗಾಗಿದ್ದಾರೆ. ಈ ಬೆನ್ನಲ್ಲೇ ಮತ್ತೊಂದು ವಂಚನೆ ಆರೋಪ ಕೇಳಿ ಬಂದಿದೆ. ಉಡುಪಿಯಲ್ಲಿ ವ್ಯಕ್ತಿಯೊಬ್ಬರಿಗೆ ಬಟ್ಟೆ ಅಂಗಡಿ ತೆರೆಯಲು ಅಗತ್ಯ ಅನುಮತಿ, ವ್ಯವಸ್ಥೆ ಮಾಡಿಕೊಡುವುದಾಗಿ ಚೈತ್ರಾ ಕುಂದಾಪುರ ನಂಬಿಕೆ ಬರುವಂತೆ ಮಾಡಿದ್ದಳು. ನಂಬಿಸಿ ಐದು ಲಕ್ಷ ಹಣ ಪಡೆದು ಆ ನಂತರ ಬೆದರಿಸಿ ಹಣ ನೀಡದೆ ವಂಚನೆ ಮಾಡಿದ್ದಾರೆ ಎಂದು ಸಂತ್ರಸ್ತ ಆರೋಪಿಸಿದ್ದಾರೆ.

ಸುದಿನ ಪೂಜಾರಿ ಕೋಡಿ ಎಂಬುವರು ವಂಚನೆಗೊಳಗಾದ ವ್ಯಕ್ತಿ. 2015ರಲ್ಲಿ ಸಮಾವೇಶ ಒಂದರಲ್ಲಿ ಸುಧೀನ ಪೂಜಾರಿ ಅವರಿಗೆ ಚೈತ್ರಾ ಕುಂದಾಪುರ ಪರಿಚಯವಾಗಿದೆ. ರಾಜಕೀಯ ವ್ಯಕ್ತಿಗಳ ಬಳಿ ಕರೆದುಕೊಂಡು ಹೋಗಿ ನಂಬಿಸಿದ್ದ ಚೈತ್ರಾ, 2018-2023 ರ ಅವಧಿಯಲ್ಲಿ ಅಂಗಡಿ ನಿರ್ಮಾಣಕ್ಕೆ ಐದು ಲಕ್ಷ ಹಣವನ್ನು ಹಂತ ಹಂತವಾಗಿ ಪಡೆದ್ದಾಳೆ. ಮೂರು ಲಕ್ಷವನ್ನ ಚೈತ್ರಾ ಖಾತೆಗೆ ವರ್ಗಾಯಿಸಿದ್ದ ಸುದೀನ, ಉಳಿದ ಎರಡು ಲಕ್ಷ ಹಣವನ್ನ ನಗದು ರೂಪದಲ್ಲಿ ನೀಡಿದ್ದರು.

ಸುದಿನ ಅವರು ಕೇಳಿದ ಸಂದರ್ಭದಲ್ಲಿ ಕೊನೆಗೆ ಹಂತದಲ್ಲಿದೆ ಎಂದು ಸುಳ್ಳು ಹೇಳುತ್ತಿದ್ದ ಚೈತ್ರಾ, ಚುನಾವಣಾ ಪ್ರಚಾರ, ಭಾಷಣ, ಕಾರ್ಯಕಾರಣಿ ಸಭೆ, ಪಕ್ಷದ ಮುಖಂಡರ ಭೇಟಿ ನೆಪ ಹೇಳಿ ತಪ್ಪಿಸಿಕೊಳ್ಳುತ್ತಿದ್ದರು. ಅನುಮಾನಗೊಂಡ ಸುಧೀನ ಕೂಡಲೇ ಬಟ್ಟೆ ಅಂಗಡಿಗೆ ಒತ್ತಾಯಿಸಿದ. ಈ ವೇಳೆ ಸುಳ್ಳು ಅತ್ಯಾಚಾರ ಪ್ರಕರಣ ಹಾಕುತ್ತೇನೆ ಬೆದರಿಕೆ ಹಾಕಿದ್ದಾರೆ.ನನ್ನ ಮತ್ತೊಬ್ಬ ಸ್ನೇಹಿತ ಕೂಡಾ ೧ ಲಕ್ಷ ಸಾಲ ಮಾಡಿ ಹಣ ನೀಡಿದ್ದಾರೆ.ಈಗ ಲೋನ್ ಅವನ ಹೆಸರಿನಲ್ಲಿ ಹಣ ಅವಳ ಹತ್ತಿರ ಇದೆ. ಇಂತಹ ಮೋಸದಲ್ಲಿ ತುಂಬಾ ಮಂದಿ ಸಿಕ್ಕಿಬಿದ್ದಾರೆ.ಅವರೆಲ್ಲಾ ಬಂದು ದಾಖಲೆ ಸಮೇತ ದೂರು ನೀಡಬೇಕು. ಮಾಧ್ಯಮದ ಮುಂದೆ ತಮ್ನ ಅಳಲನ್ನು ವ್ಯಕ್ತ ಪಡಿಸಿದ ಸಂತ್ರಸ್ತ ಯುವಕ ಸುದಿನ ಪೂಜಾರಿ ಕೋಡಿ.

ಸದ್ಯ ಸುದಿನ ಪೂಜಾರಿ ಅವರು ಈ ಬಗ್ಗೆ ಬ್ರಹ್ಮಾವರ ವೃತ್ತ ವ್ಯಾಪ್ತಿಯ ಕೋಟ ಪೊಲೀಸ್ ಠಾಣೆಗೆ ದೂರು ನೀಡಿದ್ದು,ಅದರಂತೆ ಪೊಲೀಸರು ಚೈತ್ರಾ ವಿರುದ್ಧ 506 417, 420 ಐಪಿಸಿ‌ ಸೆಕ್ಷನ್ ಅಡಿ ಎಫ್ಐಆರ್ ದಾಖಲಿಸಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News