Saturday, July 27, 2024
Homeಸುದ್ದಿಕರಾವಳಿಚೈತ್ರಾ & ಗ್ಯಾಂಗ್ ಗೆ ವಿಚಾರಣಾಧೀನ ಕೈದಿ ನಂಬರ್ ನೀಡಿದ ಜೈಲಾಧಿಕಾರಿ

ಚೈತ್ರಾ & ಗ್ಯಾಂಗ್ ಗೆ ವಿಚಾರಣಾಧೀನ ಕೈದಿ ನಂಬರ್ ನೀಡಿದ ಜೈಲಾಧಿಕಾರಿ

ಬೆಂಗಳೂರು : ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಆ್ಯಂಡ್ ಇದೀಗ ಪರಪ್ಪನ ಅಗ್ರಹಾರದಲ್ಲಿದ್ದು, ಇದೀಗ ಜೈಲಾಧಿಕಾರಿಗಳು ಆರೋಪಿಗಳಿಗೆ ಕೈದಿ ನಂಬರ್ ನೀಡಿದ್ದಾರೆ.

ಪ್ರಕರಣದ ಎ1 ಆರೋಪಿ ಚೈತ್ರಾಗೆ 9737 ನೇ ನಂಬರ್ ನೀಡಿದ್ದರೆ, ಇನ್ನುಳಿದ ಆರೋಪಿಗಳಾದ ಮೋಹನ್ ಕುಮಾರ್ ಕೈದಿ ನಂಬರ್ 9738, ರಮೇಶ್-9739 ಚೆನ್ನಾನಾಯ್ಕ-9740, ಧನರಾಜ್-9741 ಎಂದು ವಿಚಾರಣಾಧೀನ ನಂಬರ್ ನೀಡಲಾಗಿದೆ.

ಗೋವಿಂದ ಬಾಬು ಪೂಜಾರಿಗೆ 5 ಕೋಟಿ ವಂಚನೆ ಕೇಸ್ನಲ್ಲಿ ಸಿಲುಕಿದ್ದ ಚೈತ್ರಾ ಗ್ಯಾಂಗ್ನ್ನ ಸಿಸಿಬಿ ಪೊಲೀಸರು 10 ದಿನಗಳಿಂದ ತಮ್ಮ ಕಸ್ಟಡಿಯಲ್ಲಿ ಇಟ್ಟುಕೊಂಡಿದ್ದರು.

ಆದ್ರೆ ನಿನ್ನೆ(ಸೆಪ್ಟೆಂಬರ್ 23) ಕಸ್ಟಡಿ ಅಂತ್ಯವಾಗಿದ್ದರಿಂದ ಬೆಂಗಳೂರಿನ 3ನೇ ಎಸಿಎಂಎಂ ಕೋರ್ಟ್ಗೆ ವಂಚಕರ ಗ್ಯಾಂಗ್ನ್ನ ಸಿಸಿಬಿ ಪೊಲೀಸರು ಹಾಜರು ಪಡಿಸಿದ್ದರು.

ನ್ಯಾಯಾಲಯವೂ ಚೈತ್ರಾ ಹಾಗೂ ಆಕೆಯ ಗ್ಯಾಂಗ್ನ ಗಗನ್ ಕಡೂರ್, ಧನರಾಜ್, ರಮೇಶ್, ಶ್ರೀಕಾಂತ್ ಮತ್ತು ಚೆನ್ನನಾಯ್ಗೆ 14 ದಿನಗಳು ಅಂದ್ರೆ ಅಕ್ಟೋಬರ್ 6 ರ ತನಕ ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ. ಆ ವೇಳೆ ಚೈತ್ರಾ ನ್ಯಾಯಾಧೀಶರ ಎದುರು ಗಳಗಳನೆ ಕಣ್ಣೀರು ಹಾಕಿದ್ದಳು. ನಂತರ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಇನ್ನು ವಂಚನೆ ಕೇಸ್ನಲ್ಲಿ ಮೂರನೇ ಆರೋಪಿ ಹಾಲಶ್ರೀಗೆ ಸಂಕಷ್ಟ ಶುರುವಾಗಿದೆ. ಏಕೆಂದ್ರೆ, ವಂಚನೆ ಗ್ಯಾಂಗ್ ಪರಪ್ಪನ ಅಗ್ರಹಾರ ಸೇರಿದ್ರೆ, ಹಾಲಶ್ರೀಯನ್ನ ಮಾತ್ರ ಸೆಪ್ಟೆಂಬರ್29 ರವರೆಗೆ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ.

ಕಣ್ಣೀರಿನಲ್ಲಿ ರಾತ್ರಿ ಕಳೆದ ಚೈತ್ರಾ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಚೈತ್ರಾ, ನಿದ್ದೆ ಇಲ್ಲದೇ ಚಿಂತೆಯಲ್ಲೇ ಕಣ್ಣೀರಿನಲ್ಲಿ ರಾತ್ರಿ ಕಳೆದಿದ್ದಾಳೆ. ನಿನ್ನೆ(ಸೆ.23) ಸಂಜೆ 6 ಗಂಟೆ ಸುಮಾರಿಗೆ ಜೈಲು ಪ್ರವೇಶಿಸಿದ್ದ ಚೈತ್ರಾ ಅಂಡ್ ಗ್ಯಾಂಗ್, ಪರಪ್ಪನ ಅಗ್ರಹಾರ ಜೈಲಿನ ಹೊಸ ಬಂಧಿಖಾನೆಯಲ್ಲಿದೆ.

ಆದ್ರೆ, ಚೈತ್ರಾಳನ್ನು ಪ್ರತ್ಯೇಕ ಕ್ವಾರಂಟೈನ್ ಸೆಲ್ನಲ್ಲಿ ಇರಿಸಲಾಗಿದ್ದು, ನಿನ್ನೆ ರಾತ್ರಿ ಸಿಬ್ಬಂದಿಗಳು ನೀಡಿದ ಚಪಾತಿ, ಅನ್ನ-ಸಾಂಬರ್ ಸೇವಿಸಿದ ಚೈತ್ರಾ, ಬಳಿಕ ಇಂದು(ಸೆ.24) ಬೆಳಿಗ್ಗೆ ಜೈಲು ಸಿಬ್ಬಂದಿಗಳು ನೀಡಿ ಪಲಾವ್ ಸೇವಿಸಿದ್ದಾಳೆ. ಸದ್ಯ ಇನ್ನು 9 ದಿನ ಹೊಸ ಬಂಧಿಖಾನೆಯಲ್ಲೇ ಉಳಿಯಲಿರುವ ಚೈತ್ರಾಳನ್ನು ಬಳಿಕ ಹಳೆ ಬಂಧಿಖಾನೆಗೆ ಶಿಫ್ಟ್ ಮಾಡಲಾಗುತ್ತದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News