Saturday, July 27, 2024
Homeಸುದ್ದಿಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲುತೂರಾಟ; ರಾಗಿಗುಡ್ಡ ಪ್ರದೇಶದಲ್ಲಿ ಸೆಕ್ಷನ್ 144 ಜಾರಿ

ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲುತೂರಾಟ; ರಾಗಿಗುಡ್ಡ ಪ್ರದೇಶದಲ್ಲಿ ಸೆಕ್ಷನ್ 144 ಜಾರಿ

ಶಿವಮೊಗ್ಗ, ಅ.02: ಈದ್ ಮಿಲಾದ್ ಮೆರವಣಿಗೆ ವೇಳೆ ಶಿವಮೊಗ್ಗದ ರಾಗಿಗುಡ್ದದಲ್ಲಿ ಕಲ್ಲು ತೂರಾಟ ನಡೆದಿದೆ.

ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಮುಂಜಾಗೃತಾ ಕ್ರಮವಾಗಿ 144 ಸೆಕ್ಷನ್​​ ಕೂಡ ಜಾರಿ ಮಾಡಲಾಗಿದೆ.

ಮೆರವಣಿಗೆ ಮಧ್ಯೆ ಕಲ್ಲು ತೂರಾಟ ನಡೆದಿದ್ದರಿಂದ ಯುವಕನೊಬ್ಬನ ತಲೆಗೆ ಪೆಟ್ಟು ಬಿದ್ದಿದೆ. ಹೀಗಾಗಿ ಮೆರವಣಿಗೆಯನ್ನು ಸ್ಥಗಿತಗೊಳಿಸಲಾಗಿತ್ತು. ನಂತರ ಕೆಲ ಪೊಲೀಸರ ಮೇಲೂ ಕಲ್ಲು ಎಸೆದರು.

ಎಸ್​​ಪಿ ಮಿಥುನ್​ ಕುಮಾರ್ ಮೇಲೆ ಕಲ್ಲು ತೂರಾಟ ಮಾಡಲಾಗಿದ್ದು, ಓರ್ವ ಪೊಲೀಸ್ ಹಾಗೂ ಮೂವರು ಯುವಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಶಿವಮೊಗ್ಗದ ರಾಗಿಗುಡ್ದ ಬಡಾವಣೆಯಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದೆ. ಸ್ಥಳಕ್ಕೆ ಆರ್​​ಎಎಫ್​ ತುಕಡಿ, ಪೊಲೀಸ್ ಪಡೆ ಆಗಮಿಸಿದ್ದು, ಮುಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ​ ಜಾರಿ ಮಾಡಲಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News