ಕರ್ತವ್ಯ ನಿರತ ಅರಣ್ಯಾಧಿಕಾರಿ, ಸಿಬ್ಬಂದಿಗೆ ನಿಂದನೆ : ಹರೀಶ್‌ ಪೂಂಜ ವಿರುದ್ಧ FIR

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಅರಣ್ಯದಲ್ಲಿ ಮನೆ ನಿರ್ಮಾಣ-ತೆರವು ಜಟಾಪಟಿ ವಿಚಾರವಾಗಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ಮೇಲೆ ಎಫ್ಐಆರ್ ದಾಖಲಾಗಿದೆ.

ಅರಣ್ಯಾಧಿಕಾರಿ ಜಯಪ್ರಕಾಶ್ ಕೆಕೆ ನೀಡಿದ ದೂರಿನ ಹಿನ್ನೆಲೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ಟೋಬರ್ 09 ರಂದು ಅರಣ್ಯಾಧಿಕಾರಿಗಳು ಮತ್ತು ಶಾಸಕರ ನಡಯವ ಭಾರೀ ಜಟಾಪಟಿ ನಡೆದಿತ್ತು. ಈ ವೇಳೆ ಅರಣ್ಯಾಧಿಕಾರಿ ಜಯಪ್ರಕಾಶ್ ಗೆ ಶಾಸಕ ಹರೀಶ್ ಪೂಂಜ ಬೈದಿದ್ದರೆನ್ನಲಾಗಿದೆ. ಈ ಹಿನ್ನಲೆ ಶಾಸಕ ಹಾಗೂ ಬೆಂಬಲಿಗರ ವಿರುದ್ಧ ದೂರು ನೀಡಿದ್ದಾರೆ.

ಶಾಸಕ ಹರೀಶ್ ಪೂಂಜಾಮೇಲೆ ಐಪಿಸಿ 1860(U/S-143, 353, 504, 149) ಅಡಿ ಪ್ರಕರಣ ದಾಖಲಾಗಿದೆ.

You cannot copy content from Baravanige News

Scroll to Top