ಕುಂದಾಪುರ, ಅ.19: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು 18 ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಅರಾಟೆ ಮುಳ್ಳಿಕಟ್ಟೆ ನಡುವೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಜೆ ನಡೆದಿದೆ.
![](https://i0.wp.com/www.baravanige.com/wp-content/uploads/2023/10/IMG-20231019-WA0007-1-1024x768-optimized.jpg?w=696&ssl=1)
ಕುಂದಾಪುರದಿಂದ ಬೈಂದೂರು ಕಡೆ ಹೊರಟ ಲೋಕಲ್ ಬಸ್ಸು ಅರಾಟೆ ಸೇತುವೆ ದಾಟಿದ ಬಳಿಕ ಚಾಲಕನ ಅತಿವೇಗ ಹಾಗೂ ನಿರ್ಲಕ್ಷದಿಂದಾಗಿ ನಿಯಂತ್ರಣ ತಪ್ಪಿದ್ದು, ಡಿವೈಡರ್ ಏರಿ ಪಕ್ಕದ ರಸ್ತೆಗೆ ಪಲ್ಟಿಯಾಗಿದೆ.
![](https://i0.wp.com/www.baravanige.com/wp-content/uploads/2023/10/IMG-20231019-WA0008-1024x768-optimized.jpg?w=696&ssl=1)
ಇದೇ ವೇಳೆ ಎದುರಿಗೆ ಬರುತ್ತಿದ್ದ ಕಾರಿಗೂ ಡಿಕ್ಕಿ ಹೊಡೆದಿದೆ. ಅಘಘಾತದ ರಭಸಕ್ಕೆ ಬಸ್ಸಿನಲ್ಲಿದ್ದ 18ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯಗಳಾಗಿದೆ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.