Saturday, July 27, 2024
Homeಸುದ್ದಿಚಿಕ್ಕಮಗಳೂರಿನಲ್ಲಿ ನಿಷೇಧಾಜ್ಞೆ ನಡುವೆಯೂ ಮಹಿಷ ದಸರಾ ಆಚರಣೆ - ಹಲವರ ಬಂಧನ..!!

ಚಿಕ್ಕಮಗಳೂರಿನಲ್ಲಿ ನಿಷೇಧಾಜ್ಞೆ ನಡುವೆಯೂ ಮಹಿಷ ದಸರಾ ಆಚರಣೆ – ಹಲವರ ಬಂಧನ..!!

ಚಿಕ್ಕಮಗಳೂರು, ಅ 20: ಚಿಕ್ಕಮಗಳೂರಿನಲ್ಲಿ ನಿಷೇಧಾಜ್ಞೆ ನಡುವೆಯೂ ಮಹಿಷ ದಸರಾ ಆಚರಣೆ ಮಾಡಲು ಬಂದಿದ್ದ ಸಂಘಟನೆಯೊಂದರ ಕಾರ್ಯಕರ್ತರನ್ನ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ನಗರದ ಹನುಮಂತಪ್ಪ ವೃತ್ತದಲ್ಲಿ ಅಂಗಡಿ ಚಂದ್ರು ನೇತೃತ್ವದಲ್ಲಿ ಪ್ರಗತಿಪರ ಸಂಘಟನೆ ಕಾರ್ಯಕರ್ತರು ಮಹಿಷಾಸುರನ ಭಾವಚಿತ್ರ ಪ್ರದರ್ಶನ ಮಾಡಿದ್ದಾರೆ ಈ ವೇಳೆ ಪೊಲೀಸರು ಕಾರ್ಯಕರ್ತರನ್ನು ತಡೆಯಲು ಮುಂದಾಗಿದ್ದು ಈ ವೇಳೆ ಕಾರ್ಯಕರ್ತರು ಪೋಲೀಸರ ವಿರುದ್ಧ ಕಿಡಿಕಾರಿದ್ದಾರೆ.

ಇನ್ನು ಮಹಿಷಾಸುರನ ಆಚರಣೆಗೆ ಅವಕಾಶ ನೀಡದ ನಿಟ್ಟಿನಲ್ಲಿ ಆಕ್ರೋಶಗೊಂಡ ಕಾರ್ಯಕರ್ತರು ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.

ಈ ವೇಳೆ ಪೊಲೀಸರು ಹಾಗೂ ದಲಿತ ಸಂಘಟನೆ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News