Saturday, July 27, 2024
Homeಸುದ್ದಿಬೆಳ್ತಂಗಡಿ: ತಂದೆಯಿಂದಲೇ ಮಗನ ಹತ್ಯೆ

ಬೆಳ್ತಂಗಡಿ: ತಂದೆಯಿಂದಲೇ ಮಗನ ಹತ್ಯೆ

ಬೆಳ್ತಂಗಡಿ, ಅ.30: ತಾಲೂಕಿನ ಉಜಿರೆ ಗ್ರಾಮದ ಕೊಡೆಕಲ್ಲು ಎಂಬಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ತಂದೆಯೇ ಮಗನನ್ನು ಕೊಲೆ ಮಾಡಿರುವ ಘಟನೆ ಆ.29 ರಂದು ರಾತ್ರಿ ನಡೆದಿದೆ.

ಮೃತ ವ್ಯಕ್ತಿಯನ್ನು ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ ಜಗದೀಶ್(30) ಎಂದು ಗುರುತಿಸಲಾಗಿದೆ. ಈತನ ತಂದೆ ಕೃಷ್ಣಯ್ಯ ಆಚಾರಿ ಎಂಬಾತನೇ ಕೊಲೆ ಆರೋಪಿ.

ರಾತ್ರಿ ತಂದೆ ಮತ್ತು ಮಗನ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಮಾತಿಗೆ ಮಾತು ಹೆಚ್ಚಾದಾಗ ಕೃಷ್ಣಯ್ಯ ಆಚಾರಿ ತನ್ನ ಕಪಾಟಿನಲ್ಲಿ ಇರಿಸಿದ್ದ ಚೂರಿಯಿಂದ ಮಗನ ಕುತ್ತಿಗೆಗೆ ಇರಿದಿದ್ದಾನೆ ಎನ್ನಲಾಗಿದೆ.

ಇನ್ನು ಘಟನೆ ಬಳಿಕ ಮನೆಯವರು ಸೇರಿ ಜಗದೀಶ್ ನನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಸಾವನ್ನಪ್ಪಿದ್ದಾನೆ.

ಕೊಲೆ ಮಾಡಿದ ಕೃಷ್ಣಯ್ಯ ಅಚಾರಿಯನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News