Friday, March 29, 2024
Homeಸುದ್ದಿಬೆಲೆ ಏರಿಕೆಯ ಭೀತಿಯಲ್ಲಿದ್ದ ರಾಜ್ಯದ ಜನತೆಗೆ ಸಿಹಿಸುದ್ದಿ : ಸದ್ಯಕ್ಕೆ ಹಾಲು, ನೀರು, ವಿದ್ಯುತ್ ದರ...

ಬೆಲೆ ಏರಿಕೆಯ ಭೀತಿಯಲ್ಲಿದ್ದ ರಾಜ್ಯದ ಜನತೆಗೆ ಸಿಹಿಸುದ್ದಿ : ಸದ್ಯಕ್ಕೆ ಹಾಲು, ನೀರು, ವಿದ್ಯುತ್ ದರ ಏರಿಕೆ ಇಲ್ಲ : ಸಿಎಂ ಬೊಮ್ಮಾಯಿ

ಬೆಂಗಳೂರು : ಬೆಲೆ ಏರಿಕೆಯ ಭೀತಿಯಲ್ಲಿದ್ದ ರಾಜ್ಯದ ಜನತೆಗೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಹಾಲು, ನೀರು, ವಿದ್ಯುತ್ ದರ ಏರಿಕೆಯ ಪ್ರಸ್ತಾಪ ಇಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಾಲು, ನೀರು, ವಿದ್ಯುತ್ ದರ ಏರಿಕೆ ಮಾಡುವುದಿಲ್ಲ.

ಆಡಳಿತ ವ್ಯವಸ್ಥೆಯಲ್ಲಿ ದರ ಏರಿಕೆ ಪ್ರಸ್ತಾಪ ಬರೋದು ಸಹಜ, ಆದರೆ ರಾಜ್ಯ ಸರ್ಕಾರ ದರ ಏರಿಕೆ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಬೆಲೆ ಏರಿಕೆಯ ಭೀತಿಯಲ್ಲಿದ್ದ ರಾಜ್ಯದ ಜನತೆಗೆ ಸಿಹಿಸುದ್ದಿ ನೀಡಿದ್ದಾರೆ.

ಶುಕ್ರವಾರ ಇಂಧನ ಸಚಿವ ಸುನಿಲ್ ಕುಮಾರ್ ಅವರು ಮಾತನಾಡಿ, ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಾಗಬೇಕಾದರೆ ವಿದ್ಯುತ್ ದರ ಅನಿವಾರ್ಯ ಎಂದು ಹೇಳಿದ್ದರು. ಜೊತೆಗೆ ಹಾಲು ದರ 3 ರೂ. ಏರಿಕೆಗೆ ಕೆಎಂಎಫ್ ಪ್ರಸ್ತಾಪ ಸಲ್ಲಿಸಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News