ಬಂದರಿನಲ್ಲಿ ಅಗ್ನಿ ಅವಘಡ : 40ಕ್ಕೂ ಅಧಿಕ ದೋಣಿಗಳು ಬೆಂಕಿಗಾಹುತಿ

ಆಂಧ್ರಪ್ರದೇಶ: ವಿಶಾಖಪಟ್ಟಣಂನ ಮೀನುಗಾರಿಕಾ ಬಂದರಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 40 ಕ್ಕೂ ಅಧಿಕ ದೋಣಿಗಳು ಸುಟ್ಟು ಕರಕಲಾಗಿವೆ ಎನ್ನಲಾಗಿದೆ.


ಅಗ್ನಿ ಅವಘಡದಿಂದ ದೋಣಿಯೊಂದಕ್ಕೆ ಬೆಂಕಿ ಹತ್ತಿದ್ದು ಬಳಿಕ ಬೆಂಕಿ ಅಕ್ಕಪಕ್ಕದ ದೋಣಿಗಳಿಗೂ ವ್ಯಾಪಿಸಿದೆ. ಈ ಘಟನೆಯಲ್ಲಿ ಸುಮಾರು ನಲ್ವತ್ತಕ್ಕೂ ಹೆಚ್ಚು ದೋಣಿಗಳು ಸುಟ್ಟು ಕರಕಲಾಗಿವೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನು ಉದ್ದೇಶಪೂರ್ವಕವಾಗಿಯೇ ಯಾರೋ ಅಪರಿಚಿತರು ದೋಣಿಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಈಗಾಗಲೇ 40 ಕ್ಕೂ ಹೆಚ್ಚು ದೋಣಿಗಳು ಸುಟ್ಟು ಕರಕಲಾಗಿವೆ ಎನ್ನಲಾಗಿದ್ದು, ಮಾಹಿತಿ ಪಡೆದ ಬಂದರು ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ.

You cannot copy content from Baravanige News

Scroll to Top