ಉಡುಪಿ: ಮಠದಬೆಟ್ಟು ತೋಡಿಗೆ ಆಕಸ್ಮಿಕವಾಗಿ‌ ಜಾರಿ ಬಿದ್ದು ಹೋಟೆಲ್ ನೌಕರ ಮೃತ್ಯು

ಉಡುಪಿ, ಜೂ 29: ವ್ಯಕ್ತಿಯೋರ್ವ ಕಾಲುಸಂಕದ ಮೇಲಿಂದ ಆಕಸ್ಮಿಕವಾಗಿ‌ ಕಾಲು ಜಾರಿ ತೋಡಿಗೆ ಬಿದ್ದು ಮೃತಪಟ್ಟ ಘಟನೆ ಉಡುಪಿ ಮಠದಬೆಟ್ಟು ಎಂಬಲ್ಲಿ ನಡೆದಿದೆ.

ಮೃತನನ್ನು ಬಿಜೂರು ನಿವಾಸಿ ಸತೀಶ್( 33) ಎಂದು ಗುರುತಿಸಲಾಗಿದೆ.

ಈತ ಉಡುಪಿಯ ಪ್ರತಿಷ್ಠಿತ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದು, ನಿನ್ನೆ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದನು. ಇಂದು ಮಧ್ಯಾಹ್ನದ ಸುಮಾರಿಗೆ ಮಠದಬೆಟ್ಟು ತೋಡಿನಲ್ಲಿ ಸತೀಶ್ ಮೃತದೇಹ ಪತ್ತೆಯಾಗಿದೆ. ಸತೀಶ್ ಎರಡು ವರ್ಷಗಳ ಹಿಂದೆ ಮದುವೆಯಾಗಿದ್ದು, ಒಂದು ಮಗು ಇದೆ ಎಂದು ತಿಳಿಬಂದಿದೆ.

ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ಮೃತದೇಹವನ್ನು ಮೇಲೆತ್ತಿದರು. ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲು ನೆರವಾದರು.

ಘಟನಾ ಸ್ಥಳಕ್ಕೆ ಎಸ್ಪಿ ಅಕ್ಷಯ್ ಮಚ್ಚೀಂದ್ರ, ಎಎಸ್ಪಿ ಸಿದ್ದಲಿಂಗಪ್ಪ ಭೇಟಿ ಪರಿಶೀಲನೆ ನಡೆಸಿದರು. ಉಡುಪಿ ನಗರ ಠಾಣೆ ಪ್ರಕರಣ ದಾಖಲಾಗಿದೆ.

You cannot copy content from Baravanige News

Scroll to Top