ಪ್ರಚೋದನಕಾರಿ ಭಾಷಣ : ಭಜರಂಗದಳ ಮುಖಂಡ ಪುನೀತ್ ಅತ್ತಾವರ ವಿರುದ್ಧ ಪ್ರಕರಣ ದಾಖಲು

ಉಡುಪಿ: ಭಜರಂಗದಳ ಮಂಗಳೂರು ವಿಭಾಗ ಸಹ ಸಂಯೋಜಕ ಪುನೀತ್ ಅತ್ತಾವರ ಉಡುಪಿಯ ಕಾರ್ಕಳದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಕೇಳಿ ಬಂದಿದ್ದು, ಪುನೀತ್ ಅತ್ತಾವರ ಹಾಗು ಕಾರ್ಕಳ ಭಜರಂಗದಳ ನಗರ ಸಂಚಾಲಕ ಸಂಪತ್ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತ ದೂರನ್ನು ದಾಖಲಿಸಿಕೊಂಡಿದ್ದಾರೆ.



ಆ. 13 ರ ಭಾನುವಾರದಂದು ಕಾರ್ಕಳ ನಗರ ಭಜರಂಗದಳ ವತಿಯಿಂದ ಕಾರ್ಕಳದಲ್ಲಿ ಪಂಜಿನ ಮೆರವಣಿಗೆಯನ್ನು ಆಯೋಜನೆ ಮಾಡಲಾಗಿತ್ತು.

ಈ ವೇಳೆ ನಡೆದ ಸಭಾ ಕಾರ್ಯಕ್ರಮದಲ್ಲಿ ಭಾಷಣ ಮಾಡಿರುವ ಪುನೀತ್ ಅತ್ತಾವರ ಬ್ಯಾರಿ ಯಾವ ಕೈಯಿಂದ ಗೋಮಾತೆಯನ್ನು ಕಡಿಯುತ್ತಾನೋ, ಅವನ ದೇಹದಿಂದ ಅದೇ ಕೈಯನ್ನು ಬೇರ್ಪಡಿಸುವ ಸಂಕಲ್ಪ ತೊಡಬೇಕೆಂಬ ಹೇಳಿಕೆಯನ್ನು ನೀಡಿದ್ದಾರೆ.

ಈ ಕುರಿತು ಕಾರ್ಕಳ ನಗರ ಠಾಣೆಯ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ.

You cannot copy content from Baravanige News

Scroll to Top